ಉಡುಪಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಅಂತಿಮವಾಗಿ 12 ಅಭ್ಯರ್ಥಿಗಳು ಸ್ಪರ್ಧೆ – Vishwanews24

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಂತಿಮವಾಗಿ 12 ಅಭ್ಯರ್ಥಿಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆಂದು ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ತಿಳಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 14,98,016 ಮತದಾರರಿದ್ದು ಅದರಲ್ಲಿ ಮಹಿಳೆಯರು 7,65,823 ಮತ್ತು ಪುರುಷರು 7,32,193. ಯುವ ಮತದಾರರ ಸಂಖ್ಯೆ 30,826 ಇದೆ. 11,861 ಮತದಾರ ವಿಕಲಚೇತನರಾಗಿದ್ದಾರೆಂದು ಹೆಫ್ಸಿಬಾ ಮಾಹಿತಿ ನೀಡಿದ್ದಾರೆ.

ಮಹಿಳೆಯರ ವಿಶೇಷ ಮತದಾನ ಕೇಂದ್ರವಾಗಿ 26 ಸಖಿ ಮತದಾನ ಕೇಂದ್ರ ಸ್ಥಾಪಿಸಲಾಗಿದೆ.

ಎರಡು ಕ್ಷೇತ್ರದಲ್ಲಿ 1837 ಮತದಾನ ಕೇಂದ್ರ ಸ್ಥಾಪಿಸಲಿದ್ದು, ಉಡುಪಿಯಲ್ಲಿ 1,111 ಮತದಾನ ಕೇಂದ್ರವಿರಲಿದೆ. ಸುಮಾರು 5616 ಸಿಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ.

ಆಯೋಗದಿಂದ ಅನುಮೋದನೆಗೊಂಡ ಬಳಿಕ ಬ್ಯಾಲೆಟ್‌ ಯುನಿಟ್‌ಗೆ ಅಳವಡಿಸುವ ಹಾಗೂ ಟೆಂಡರ್ ಮತಕ್ಕೆ ಅಗತ್ಯವಿರುವ ಮತಪತ್ರಗಳನ್ನು ಸರ್ಕಾರಿ ಮುದ್ರಣಾಲಯದಲ್ಲಿ ಮುದ್ರಿಸಲಾಗುತ್ತದೆ. ಸೇವಾ ಮತದಾರರಿಗೆ ಅಂಚೆ ಮತಪತ್ರವನ್ನು ಇಟಿಬಿಪಿಎಸ್ ತಂತ್ರಾಂಶದ ಮೂಲಕ ಕಳುಹಿಸಲಾಗುವುದು ಎಂದರು.

ಲೋಕಸಭಾ ಕ್ಷೇತ್ರದಲ್ಲಿ 548 ಪುರುಷ ಹಾಗೂ 7 ಮಹಿಳಾ ಸೇವಾ ಮತದಾರರಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಂಚೆಮತಪತ್ರವನ್ನು ಮುದ್ರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಶೇ 99.9ರಷ್ಟು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿದೆ.

ಪಿ.ಪರಮೇಶ್ವರ್ (ಬಿಎಸ್ಪಿ),

ಪ್ರಮೋದ್ ಮಧ್ವರಾಜ್ (ಜೆಡಿ (ಎಸ್),

ಶೋಭಾ ಕರಂದ್ಲಾಜೆ (ಬಿಜೆಪಿ),

ಪಿ ಗೌತಮ್ ಪ್ರಭು (ಶಿವ ಸೇನೆ),

ಎಂ.ಕೆ ದಯಾನಂದ (ಪ್ರೌಟಿಸ್ಟ್ ಸರ್ವಾ ಸಮಾಜ),

ವಿಜಯಕುಮಾರ್ (ಸಿಪಿಐ- ಎಂಎಲ್ ರೆಡ್ಸ್ಟಾರ್),

ಸುರೇಶ್ ಕುಂದರ್ (ಉತ್ತರ ಪ್ರಜಾಕೀಯ ಪಕ್ಷದ ),

ಶೇಖರ್ ಹವಾನ್ಜೆ (ಆರ್ಪಿಐ)

ಮತ್ತು ಸ್ವತಂತ್ರ ಅಭ್ಯರ್ಥಿಗಳಾದ

ಅಬ್ದುಲ್ ರಹಮಾನ್,

ಅಮೃತ್ ಶೆಣೈ,

ಎಂ.ಕೆ. ಗಣೇಶ್

ಕೆ.ಸಿ. ಪ್ರಕಾಶ್

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago