ಉಡುಪಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಅಂತಿಮವಾಗಿ 12 ಅಭ್ಯರ್ಥಿಗಳು ಸ್ಪರ್ಧೆ – Vishwanews24

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಂತಿಮವಾಗಿ 12 ಅಭ್ಯರ್ಥಿಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆಂದು ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ತಿಳಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 14,98,016 ಮತದಾರರಿದ್ದು ಅದರಲ್ಲಿ ಮಹಿಳೆಯರು 7,65,823 ಮತ್ತು ಪುರುಷರು 7,32,193. ಯುವ ಮತದಾರರ ಸಂಖ್ಯೆ 30,826 ಇದೆ. 11,861 ಮತದಾರ ವಿಕಲಚೇತನರಾಗಿದ್ದಾರೆಂದು ಹೆಫ್ಸಿಬಾ ಮಾಹಿತಿ ನೀಡಿದ್ದಾರೆ.

ಮಹಿಳೆಯರ ವಿಶೇಷ ಮತದಾನ ಕೇಂದ್ರವಾಗಿ 26 ಸಖಿ ಮತದಾನ ಕೇಂದ್ರ ಸ್ಥಾಪಿಸಲಾಗಿದೆ.

ಎರಡು ಕ್ಷೇತ್ರದಲ್ಲಿ 1837 ಮತದಾನ ಕೇಂದ್ರ ಸ್ಥಾಪಿಸಲಿದ್ದು, ಉಡುಪಿಯಲ್ಲಿ 1,111 ಮತದಾನ ಕೇಂದ್ರವಿರಲಿದೆ. ಸುಮಾರು 5616 ಸಿಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ.

ಆಯೋಗದಿಂದ ಅನುಮೋದನೆಗೊಂಡ ಬಳಿಕ ಬ್ಯಾಲೆಟ್‌ ಯುನಿಟ್‌ಗೆ ಅಳವಡಿಸುವ ಹಾಗೂ ಟೆಂಡರ್ ಮತಕ್ಕೆ ಅಗತ್ಯವಿರುವ ಮತಪತ್ರಗಳನ್ನು ಸರ್ಕಾರಿ ಮುದ್ರಣಾಲಯದಲ್ಲಿ ಮುದ್ರಿಸಲಾಗುತ್ತದೆ. ಸೇವಾ ಮತದಾರರಿಗೆ ಅಂಚೆ ಮತಪತ್ರವನ್ನು ಇಟಿಬಿಪಿಎಸ್ ತಂತ್ರಾಂಶದ ಮೂಲಕ ಕಳುಹಿಸಲಾಗುವುದು ಎಂದರು.

ಲೋಕಸಭಾ ಕ್ಷೇತ್ರದಲ್ಲಿ 548 ಪುರುಷ ಹಾಗೂ 7 ಮಹಿಳಾ ಸೇವಾ ಮತದಾರರಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಂಚೆಮತಪತ್ರವನ್ನು ಮುದ್ರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಶೇ 99.9ರಷ್ಟು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿದೆ.

ಪಿ.ಪರಮೇಶ್ವರ್ (ಬಿಎಸ್ಪಿ),

ಪ್ರಮೋದ್ ಮಧ್ವರಾಜ್ (ಜೆಡಿ (ಎಸ್),

ಶೋಭಾ ಕರಂದ್ಲಾಜೆ (ಬಿಜೆಪಿ),

ಪಿ ಗೌತಮ್ ಪ್ರಭು (ಶಿವ ಸೇನೆ),

ಎಂ.ಕೆ ದಯಾನಂದ (ಪ್ರೌಟಿಸ್ಟ್ ಸರ್ವಾ ಸಮಾಜ),

ವಿಜಯಕುಮಾರ್ (ಸಿಪಿಐ- ಎಂಎಲ್ ರೆಡ್ಸ್ಟಾರ್),

ಸುರೇಶ್ ಕುಂದರ್ (ಉತ್ತರ ಪ್ರಜಾಕೀಯ ಪಕ್ಷದ ),

ಶೇಖರ್ ಹವಾನ್ಜೆ (ಆರ್ಪಿಐ)

ಮತ್ತು ಸ್ವತಂತ್ರ ಅಭ್ಯರ್ಥಿಗಳಾದ

ಅಬ್ದುಲ್ ರಹಮಾನ್,

ಅಮೃತ್ ಶೆಣೈ,

ಎಂ.ಕೆ. ಗಣೇಶ್

ಕೆ.ಸಿ. ಪ್ರಕಾಶ್

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago