ಉಡುಪಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಅಂತಿಮವಾಗಿ 12 ಅಭ್ಯರ್ಥಿಗಳು ಸ್ಪರ್ಧೆ – Vishwanews24

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಂತಿಮವಾಗಿ 12 ಅಭ್ಯರ್ಥಿಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಇಬ್ಬರು ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆಂದು ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ತಿಳಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 14,98,016 ಮತದಾರರಿದ್ದು ಅದರಲ್ಲಿ ಮಹಿಳೆಯರು 7,65,823 ಮತ್ತು ಪುರುಷರು 7,32,193. ಯುವ ಮತದಾರರ ಸಂಖ್ಯೆ 30,826 ಇದೆ. 11,861 ಮತದಾರ ವಿಕಲಚೇತನರಾಗಿದ್ದಾರೆಂದು ಹೆಫ್ಸಿಬಾ ಮಾಹಿತಿ ನೀಡಿದ್ದಾರೆ.

ಮಹಿಳೆಯರ ವಿಶೇಷ ಮತದಾನ ಕೇಂದ್ರವಾಗಿ 26 ಸಖಿ ಮತದಾನ ಕೇಂದ್ರ ಸ್ಥಾಪಿಸಲಾಗಿದೆ.

ಎರಡು ಕ್ಷೇತ್ರದಲ್ಲಿ 1837 ಮತದಾನ ಕೇಂದ್ರ ಸ್ಥಾಪಿಸಲಿದ್ದು, ಉಡುಪಿಯಲ್ಲಿ 1,111 ಮತದಾನ ಕೇಂದ್ರವಿರಲಿದೆ. ಸುಮಾರು 5616 ಸಿಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ.

ಆಯೋಗದಿಂದ ಅನುಮೋದನೆಗೊಂಡ ಬಳಿಕ ಬ್ಯಾಲೆಟ್‌ ಯುನಿಟ್‌ಗೆ ಅಳವಡಿಸುವ ಹಾಗೂ ಟೆಂಡರ್ ಮತಕ್ಕೆ ಅಗತ್ಯವಿರುವ ಮತಪತ್ರಗಳನ್ನು ಸರ್ಕಾರಿ ಮುದ್ರಣಾಲಯದಲ್ಲಿ ಮುದ್ರಿಸಲಾಗುತ್ತದೆ. ಸೇವಾ ಮತದಾರರಿಗೆ ಅಂಚೆ ಮತಪತ್ರವನ್ನು ಇಟಿಬಿಪಿಎಸ್ ತಂತ್ರಾಂಶದ ಮೂಲಕ ಕಳುಹಿಸಲಾಗುವುದು ಎಂದರು.

ಲೋಕಸಭಾ ಕ್ಷೇತ್ರದಲ್ಲಿ 548 ಪುರುಷ ಹಾಗೂ 7 ಮಹಿಳಾ ಸೇವಾ ಮತದಾರರಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಂಚೆಮತಪತ್ರವನ್ನು ಮುದ್ರಿಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಶೇ 99.9ರಷ್ಟು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿದೆ.

ಪಿ.ಪರಮೇಶ್ವರ್ (ಬಿಎಸ್ಪಿ),

ಪ್ರಮೋದ್ ಮಧ್ವರಾಜ್ (ಜೆಡಿ (ಎಸ್),

ಶೋಭಾ ಕರಂದ್ಲಾಜೆ (ಬಿಜೆಪಿ),

ಪಿ ಗೌತಮ್ ಪ್ರಭು (ಶಿವ ಸೇನೆ),

ಎಂ.ಕೆ ದಯಾನಂದ (ಪ್ರೌಟಿಸ್ಟ್ ಸರ್ವಾ ಸಮಾಜ),

ವಿಜಯಕುಮಾರ್ (ಸಿಪಿಐ- ಎಂಎಲ್ ರೆಡ್ಸ್ಟಾರ್),

ಸುರೇಶ್ ಕುಂದರ್ (ಉತ್ತರ ಪ್ರಜಾಕೀಯ ಪಕ್ಷದ ),

ಶೇಖರ್ ಹವಾನ್ಜೆ (ಆರ್ಪಿಐ)

ಮತ್ತು ಸ್ವತಂತ್ರ ಅಭ್ಯರ್ಥಿಗಳಾದ

ಅಬ್ದುಲ್ ರಹಮಾನ್,

ಅಮೃತ್ ಶೆಣೈ,

ಎಂ.ಕೆ. ಗಣೇಶ್

ಕೆ.ಸಿ. ಪ್ರಕಾಶ್

 

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

27 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

37 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 hour ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago