ಲೋಕಸಭಾ ವ್ಯಾಪ್ತಿಯಲ್ಲಿ ಮಿಂಚಿನ ಸಂಚಾರ,ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ,ಸಂಸದನಾದರೆ ನಾನು ಮಾಡುವ ಪರಿಹಾರ : ಅಮೃತ್ ಶೆಣೈ
ಉಡುಪಿ: ಜಾತ್ಯತೀತ ಮನೋಭಾವ ಹೊಂದಿರುವ ವ್ಯಕ್ತಿ ಹಲವಾರು ಚುನಾವಣೆಯನ್ನ ನಿಭಾಯಿಸಿದ ಅನುಭವವಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಮಿಂಚಿನ ಸಂಚಾರ ನಡೆಸಿ ಮತಯಾಚನೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಒಂದು ಪಕ್ಷೇತರ ಅಭ್ಯರ್ಥಿ ಈ ಸಂಚಲನ ಮತದಾರರಲ್ಲಿ ಹೊಸ ಹುರುಪನ್ನ ಹುಟ್ಟುಹಾಕಿದೆ.
ಉದ್ಯೋಗ ಸೃಷ್ಟಿ, ಉದ್ಯಮಗಳ ಪುನರುತ್ಥಾನ, ಸಾಮರಸ್ಯದ ಜೀವನ,ಅಭಿವೃದ್ಧಿಯಲ್ಲಿ ಮೇಲುಗೈ ಸಾಧಿಸಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದೆ ಎಂದು ಸದಾ ಹೇಳಿತ್ತಿರುವ ಶೆಣೈಯ ಮಾತುಗಳು ಮತದಾರರಿಗೆ ಹೊಸ ಚೈತನ್ಯ ಮೂಡಿಸುವಂತಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ದುಡಿದ ಅನುಭವ ಹಾಗೂ ಕಾರ್ಯಕರ್ತರ ಜತೆಗಿನ ನಿಕಟ ಸಂಬಂಧ ಹೊಂದಿರುವ ಅಮೃತ್ ಶೆಣೈ ಈ ಭಾರಿ ಗೆಲ್ಲುವುದರಲ್ಲಿ ಅನುಮಾನವಿಲ್ಲ ಅನ್ನುತ್ತಾರೆ ರಾಜಕೀಯ ಅನುಭವಿಗಳು.
ಎರಡೂ ಜಿಲ್ಲೆಯಲ್ಲಿ ಉದ್ಭವಿಸುತ್ತಿರುವ ಮರಳಿನ ಸಮಸ್ಯೆ,ನಿರುದ್ಯೋಗ ಸಮಸ್ಯೆ, ಹೆದ್ದಾರಿ ಸಮಸ್ಯೆ, ಅಡಿಕೆ ಬೆಳೆಗಾರರ ಸಮಸ್ಯೆ ಯ ಧ್ವನಿ ಏರಿಸಲಿದ್ದೇನೆ ಎಂದು ಅಮೃತ್ ಶೆಣೈ ಹೇಳುತ್ತಿದ್ದಾರೆ.
https://m.facebook.com/story.php?story_fbid=10157148593197480&id=844252479
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…