ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ಜೆಡಿಎಸ್ ಪಕ್ಷದ ಅಭ್ಯರ್ಥಿ ಜಯಗಳಿಸಿಲ್ಲ. ಈ ಬಾರಿ ಗೆದ್ದರೆ ಇತಿಹಾಸ ನಿರ್ಮಾಣವಾಗಲಿದೆ.
1989ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಸಂಜೀವಪ್ಪ ಸ್ಪರ್ಧಿಸಿದ್ದರು. ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಆಸ್ಕರ್ ಫರ್ನಾಂಡೀಸ್ (3,13,849) ವಿರುದ್ಧ ಜನತಾದಳದ ಸಂಜೀವಪ್ಪ (1,61,656) ಸೋಲು ಕಂಡಿದ್ದರು.
ಬಳಿಕ 1991ರ ಚುನಾವಣೆಯಲ್ಲಿ ಜನತಾದಳದಿಂದ ಯು.ಆರ್.ಸಭಾಪತಿ 1,04,071 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದರು. 1996ರ ಚುನಾವಣೆಯಲ್ಲೂ ಜನತಾದಳದ ವಸಂತ ಬಂಗೇರ 1,47,293 ಮತ ಪಡೆದು ಸೋಲು ಅನುಭವಿಸಿದ್ದರು.
1998ರ ಚುನಾವಣೆಯಲ್ಲಿ ಬಿಜೆಪಿಯ ಐಎಂ ಜಯರಾಮಶೆಟ್ಟಿ (3,41,466) ಅವರ ವಿರುದ್ಧ ಮಟ್ಟಾರು (29,238) ಸೋತು ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.
1999ರ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಶ್ರೀನಿವಾಸ (11,816) ಹೀನಾಯವಾಗಿ ಸೋತರು. 2004ರಲ್ಲಿ ತಾರಾನಾಥ್ ಶೆಟ್ಟಿ (45574), 2014ರಲ್ಲಿ ಧನಂಜಯ ಕುಮಾರ್ (14895) ಕೂಡ ಪರಾಭವಗೊಂಡರು. 2009ರಲ್ಲಿ ಜೆಡಿಎಸ್ ಅಭ್ಯರ್ಥಿಯೇ ಇರಲಿಲ್ಲ.
ಹೀಗೆ ಉಡುಪಿಯಲ್ಲಿ ನಡೆದ ಎಲ್ಲ ಲೋಕಸಭಾ ಚುನಾವಣೆಗಳಲ್ಲೂ ಜೆಡಿಎಸ್ ಕಳಪೆ ಪ್ರದರ್ಶನ ನೀಡಿದೆ. ಆದರೆ, ಈ ಬಾರಿ ಗೆಲ್ಲುವ ವಿಶ್ವಾಸದಲ್ಲಿ ಕಣಕ್ಕಿಳಿದಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಸ್ಪರ್ಧಿಸಿದ್ದಾರೆ. ಮತ್ತೊಂದೆಡೆ ಹಾಲಿ ಸಂಸದೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಎದುರಾಳಿಯಾಗಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…