Featured

ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಈ ಬಾರಿ ಜೆಡಿಎಸ್‌ ಪಕ್ಷದ ಅಭ್ಯರ್ಥಿ ಗೆದ್ದರೆ ಇತಿಹಾಸ ನಿರ್ಮಾಣ..!! – Vishwanews24

ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ಜೆಡಿಎಸ್‌ ಪಕ್ಷದ ಅಭ್ಯರ್ಥಿ ಜಯಗಳಿಸಿಲ್ಲ. ಈ ಬಾರಿ ಗೆದ್ದರೆ ಇತಿಹಾಸ ನಿರ್ಮಾಣವಾಗಲಿದೆ.

1989ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಸಂಜೀವಪ್ಪ ಸ್ಪರ್ಧಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆಸ್ಕರ್ ಫರ್ನಾಂಡೀಸ್ (3,13,849) ವಿರುದ್ಧ  ಜನತಾದಳದ ಸಂಜೀವಪ್ಪ (1,61,656) ಸೋಲು ಕಂಡಿದ್ದರು.

ಬಳಿಕ 1991ರ ಚುನಾವಣೆಯಲ್ಲಿ ಜನತಾದಳದಿಂದ ಯು.ಆರ್.ಸಭಾಪತಿ 1,04,071 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ಕುಸಿದರು. 1996ರ ಚುನಾವಣೆಯಲ್ಲೂ ಜನತಾದಳದ ವಸಂತ ಬಂಗೇರ 1,47,293 ಮತ ಪಡೆದು ಸೋಲು ಅನುಭವಿಸಿದ್ದರು.

1998ರ ಚುನಾವಣೆಯಲ್ಲಿ ಬಿಜೆಪಿಯ ಐಎಂ ಜಯರಾಮಶೆಟ್ಟಿ (3,41,466) ಅವರ ವಿರುದ್ಧ ಮಟ್ಟಾರು (29,238) ಸೋತು ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.

1999ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಶ್ರೀನಿವಾಸ (11,816) ಹೀನಾಯವಾಗಿ ಸೋತರು. 2004ರಲ್ಲಿ ತಾರಾನಾಥ್ ಶೆಟ್ಟಿ (45574), 2014ರಲ್ಲಿ ಧನಂಜಯ ಕುಮಾರ್ (14895) ಕೂಡ ಪರಾಭವಗೊಂಡರು. 2009ರಲ್ಲಿ ಜೆಡಿಎಸ್‌ ಅಭ್ಯರ್ಥಿಯೇ ಇರಲಿಲ್ಲ.

ಹೀಗೆ ಉಡುಪಿಯಲ್ಲಿ ನಡೆದ ಎಲ್ಲ ಲೋಕಸಭಾ ಚುನಾವಣೆಗಳಲ್ಲೂ ಜೆಡಿಎಸ್‌ ಕಳಪೆ ಪ್ರದರ್ಶನ ನೀಡಿದೆ. ಆದರೆ, ಈ ಬಾರಿ ಗೆಲ್ಲುವ ವಿಶ್ವಾಸದಲ್ಲಿ ಕಣಕ್ಕಿಳಿದಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಸ್ಪರ್ಧಿಸಿದ್ದಾರೆ. ಮತ್ತೊಂದೆಡೆ ಹಾಲಿ ಸಂಸದೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಎದುರಾಳಿಯಾಗಿದ್ದಾರೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago