Featured

ಉಡುಪಿ, ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಗೆದ್ದು ಬಂದರೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸೇವಕನಾಗುತ್ತೇನೆ :  ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ಶಾಸಕ, ಮಂತ್ರಿಯಾಗಿ ಜವಾಬ್ದಾರಿಯುತ ಕೆಲಸದ ಒತ್ತಡಕ್ಕೆ ಸಿಲುಕಿ ಪಕ್ಷದ ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದ ಪರಿಣಾಮ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲುಂಡಿದ್ದೇನೆ. ನನಗೆ ಕೆಟ್ಟ ಮೇಲೆ ಬುದ್ಧಿ ಬಂದಿದ್ದು, ಗೆದ್ದು ಬಂದರೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸೇವಕನಾಗುತ್ತೇನೆ ಎಂದು ಮಾಜಿ ಸಚಿವ, ಉಡುಪಿ, ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಬ್ರಹ್ಮಗಿರಿ ಕಾಂಗ್ರೆಸ್‍ನ ಭವನದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಅವರು, ಶಾಸಕ – ಮಂತ್ರಿಯಾಗಿ ಜವಾಬ್ದಾರಿಯುತ ಕೆಲಸದ ಒತ್ತಡಕ್ಕೆ ಸಿಲುಕಿ ಪಕ್ಷದ ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದ ಪರಿಣಾಮ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲುಂಡಿದ್ದೇನೆ. ನನಗೆ ಕೆಟ್ಟ ಮೇಲೆ ಬುದ್ಧಿ ಬಂದಿದ್ದು, ನಾನು ಗೆದ್ದು ಬಂದರೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸೇವಕನಾಗುತ್ತೇನೆ ಎಂದು ಹೇಳಿದ್ದಾರೆ.

ಮೈತ್ರಿ ಧರ್ಮದಂತೆ ಪಕ್ಷದ ವರಿಷ್ಠರು 8 ಸ್ಥಾನಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದು, ಮರಳಿ ಪಡೆಯಲು ಸಾಧ್ಯವಿಲ್ಲ. ನಾನು ಸ್ಪರ್ಧಿಸದಿದ್ದರೆ ಜೆಡಿಎಸ್‍ನ ಭೋಜೆಗೌಡರು ನಿಲ್ಲುತ್ತಿದ್ದರು. ಕಾಂಗ್ರೆಸ್ ಪ್ರಾಬಲ್ಯವಿರುವ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಉಳಿವು ಹಾಗೂ ಭವಿಷ್ಯದ ಹಿತಾದೃಷ್ಟಿಯಿಂದ ಹಿರಿಯರ ಅನುಮತಿ ಪಡೆದು ನಾನು ಸ್ಪರ್ಧೆ ಮಾಡುತ್ತಿದ್ದೇನೆ. ಈ ನಿಟ್ಟಿನಲ್ಲಿ ಕೆಲಸ ಮಾಡುವ ಎಂಪಿಯನ್ನು ಆಯ್ಕೆ ಮಾಡಿ ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪಕ್ಷದಲ್ಲೇ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ನಮ್ಮ ಜಿಲ್ಲೆಯಲ್ಲಿ ಎಂಪಿ ಇರಲಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡುವ ಜತೆಗೆ ಜನರ ಬಾಯಿಯಿಂದಲೂ ಗೋ ಬ್ಯಾಕ್ ಶೋಭಾ ಘೋಷಣೆ ಬರಬೇಕು. ಈ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ನೀವೇ ತೆಗೆದುಕೊಂಡು ಪ್ರಮೋದ್ ಮಧ್ವರಾಜ್ ಎನ್ನುವ ಪ್ರೊಡಕ್ಟ್‌ನ್ನು ಮಾರ್ಕೆಂಟಿಗ್ ಮಾಡಿ. ನನ್ನ ಒಳ್ಳೆತನ ಎತ್ತಿ ಹಿಡಿದು ಪ್ರಚಾರ ಮಾಡಿ. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುತ್ತೇನೆ ಎಂದು ಭರವಸೆ ಕೊಟ್ಟರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago