ಉಡುಪಿ : ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಲಾದ ಹೆಚ್ಚುವರಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ಜಿಲ್ಲೆಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ, ಹೊರಡಿಸಲಾದ ಆದೇಶದಲ್ಲಿ ಮಾರ್ಪಾಡು ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
ಸಿನಿಮಾ ಹಾಲ್, ಮಲ್ಟಿಫ್ಲೆಕ್ಸ್, ಥಿಯೇಟರ್, ರಂಗಮoದಿರ, ಆಡಿಟೋರಿಯಂ, ಜಿಮ್ ಮತ್ತು ಯೋಗ ಕೇಂದ್ರ ಹಾಗೂ ಈಜುಕೊಳಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ. 100 ಸಾಮರ್ಥ್ಯದೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಕಾರ್ಯಾಚರಿಸಲು ಅನುಮತಿ ನೀಡಲಾಗಿದ್ದು, ನಿಗಧಿತ ಆಸನ ಸಾಮರ್ಥ್ಯವನ್ನು ಮೀರಿರಬಾರದು. ಎರಡು ಡೋಸ್ ಲಸಿಕೆ ಪ್ರಮಾಣ ಪತ್ರ ಹೊಂದಿರುವ, ರೋಗ ಲಕ್ಷಣರಹಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಪ್ರವೇಶ ಸಮಯದಲ್ಲಿ ಥರ್ಮಲ್ ಸ್ಕ್ಯಾನ್ ಬಳಸಿ ಜ್ವರ ಲಕ್ಷಣಗಳ ಕುರಿತು ತಪಾಸಣೆ ನಡೆಸುವುದು ಮತ್ತು ಹ್ಯಾಂಡ್ ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿರುತ್ತದೆ.
ಸಿನಿಮಾ ಹಾಲ್, ಮಲ್ಟಿಫ್ಲೆಕ್ಸ್, ಥಿಯೇಟರ್, ರಂಗಮoದಿರ, ಆಡಿಟೋರಿಯಂಗಳಲ್ಲಿ ಸಾರ್ವಜನಿಕರು ಪ್ರದರ್ಶನ ಸಮಯ ಸೇರಿದಂತೆ ಎಲ್ಲಾ ಸಮಯದಲ್ಲಿಯೂ ಕಡ್ಡಾಯವಾಗಿ ಮಾಸ್ಕ್ ಧರಿಸಿರುವ ಕುರಿತು ಸಂಘಟಕರು ಮೇಲ್ವಿಚಾರಣೆ ನಡೆಸಬೇಕು. ಪ್ರತಿ ಪ್ರದರ್ಶನದ ನಂತರ ಸಭಾಂಗಣ ಮತ್ತು ವಿಶ್ರಾಂತಿ ಕೊಠಡಿಗಳನ್ನು ಸ್ವಚ್ಛಗೊಳಿಸುವುದು ಕಡ್ಡಾಯವಾಗಿರುತ್ತದೆ. ಸಿ.ಪಿ.ಡಬ್ಲೂö್ಯ.ಡಿ ಮಾರ್ಗಸೂಚಿಗಳ ಪ್ರಕಾರ ಎ.ಸಿ ನಿರ್ವಹಿಸಬೇಕು. ಮೇಲ್ಕಂಡ ಸ್ಥಳಗಳ ಒಳಗೆ ಉಪಾಹಾರ, ಆಹಾರ ಮತ್ತು ಪಾನೀಯಗಳ ಸೇವನೆಯನ್ನು ನಿಷೇಧಿಸಲಾಗಿರುತ್ತದೆ.
ಜಿಮ್ ಮತ್ತು ಯೋಗಕೇಂದ್ರಗಳು ಚಟುವಟಿಕೆಯನ್ನು ಹೊರಾಂಗಣದಲ್ಲಿ ಮತ್ತು ತೆರೆದ ಸ್ಥಳದಲ್ಲಿ ಇತರರಿಂದ ಯಾವುದೇ ದೂರುಗಳಿಲ್ಲದೆ ನಡೆಸಬೇಕು. 2 ಮೀಟರ್ ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಪ್ರತಿ ಸೆಷನ್ ಅಥವಾ ಬ್ಯಾಚ್ನ ನಂತರ ಸಭಾಂಗಣ ಮತ್ತು ವಿಶ್ರಾಂತಿ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು. ಸಿ.ಪಿ.ಡಬ್ಲೂö್ಯ.ಡಿ ಮಾರ್ಗಸೂಚಿಗಳ ಪ್ರಕಾರ ಎ.ಸಿ ನಿರ್ವಹಿಸಬೇಕು.
ಈಜುಕೊಳಗಳಲ್ಲಿ 2 ಮೀಟರ್ ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಪ್ರತಿ ಸೆಷನ್/ ಬ್ಯಾಚ್ನ ನಂತರ ಈಜುಗಾರರು ಉಪಯೋಗಿಸಿರುವ ಬದಲಾವಣೆ ಕೊಠಡಿ / ವಿಶ್ರಾಂತಿ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
ಮೇಲಿನ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ಡಿಸಾಸ್ಟರ್ ಮ್ಯಾನೆಜ್ಮೆಂಟ್ ಆಕ್ಟ್ 2005, ಕರ್ನಾಟಕ ಎಪಿಡೆಮಿಕ್ ಡಿಸಾಸ್ಟರ್ ಆಕ್ಟ್ 2020 ಮತ್ತು ಐ.ಪಿ.ಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…