Featured

ಉಡುಪಿ – ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಐವರ ವಿರುದ್ಧ ಪ್ರಕರಣ ದಾಖಲು – Vishwanews24

ಉಡುಪಿ, : ಕಳೆದ ರವಿವಾರ ನಗರದ ಕಲ್ಸಂಕ ಬಳಿಯ ರಾಯಲ್ ಗಾರ್ಡನ್ಸ್‌ನಲ್ಲಿ ಸಹಬಾಳ್ವೆ ಉಡುಪಿ ನೇತೃತ್ವದಲ್ಲಿ ನಡೆದ ಸರ್ವಜನೋತ್ಸವದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಕ್ಕಾಗಿ ಸಹಬಾಳ್ವೆಯ ಅಧ್ಯಕ್ಷ ಅಮೃತ ಶೆಣೈ ಸೇರಿದಂತೆ ಐವರು ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್-2ರ ಅಧಿಕಾರಿ ಕೆ.ವಿ.ನಾಗರಾಜ್ ಅವರು ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ್ ಶೆಣೈ, ಹಿರಿಯ ಪತ್ರಕರ್ತ ಹಾಗೂ ಚಿಂತಕ ದಿನೇಶ್ ಅಮೀನ್ ಮಟ್ಟು, ದಲಿತ ಮುಖಂಡ ಇಂದೂಧರ ಹೊನ್ನಾಪುರ, ರಾಜ್ಯ ಸಿಪಿಎಂನ ಪ್ರಧಾನ ಕಾರ್ಯದರ್ಶಿ ಜಿ.ಎನ್. ನಾಗರಾಜ್ ಹಾಗೂ ಸಾಮಾಜಿಕ ಚಿಂತಕ ಮಹೇಂದ್ರ ಕುಮಾರ್ ಇವರ ವಿರುದ್ಧ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಅಮೃತ ಶೆಣೈ ನೇತೃತ್ವದಲ್ಲಿ ಮಾ. 17ರಂದು ರಾಯಲ್ ಗಾರ್ಡನ್ ಮೈದಾನದಲ್ಲಿ ನಡೆದ ಸಹಬಾಳ್ವೆ ಸಭೆಯಲ್ಲಿ ದಿನೇಶ್ ಅಮೀನ್ ಮಟ್ಟು, ಮಹೇಂದ್ರ ಕುಮಾರ್, ಜಿ.ಎನ್.ನಾಗರಾಜ್, ಇಂದೂಧರ ಹೊನ್ನಾಪುರ ಇವರು ತಮ್ಮ ಭಾಷಣದಲ್ಲಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಹಾಗೂ ಮತದಾರರ ಮೇಲೆ ಪ್ರಭಾವ ಬೀರುವಂತೆ ಮುಂಬರುವ ಚುನಾವಣೆಯಲ್ಲಿ ಮತದಾರರು ಯೋಚಿಸಿ ಮತ ಚಲಾಯಿಸುವಂತೆ ಕರೆ ನೀಡಿದ್ದಲ್ಲದೇ, ಕಾರ್ಯಕ್ರಮಕ್ಕೆ ಅನುಮತಿ ಪಡೆದ ಅಮೃತ ಶೆಣೈ ಇವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವುದಾಗಿ ನಾಗರಾಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ನಗರ ಠಾಣೆಯಲ್ಲಿ ಕಲಂ:153ಎ, 295ಎ ಐಪಿಸಿ ಹಾಗೂ 125 ಆರ್.ಪಿ.ಆಕ್ಟ್ 1951ರಂತೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago