ಉಡುಪಿ: ಹೆಬ್ರಿಯು ತಾಲ್ಲೂಕು ಆಗಿದ್ದು, ತಾಲ್ಲೂಕು ಕಚೇರಿಗೆ ಸುಸಜ್ಜಿತ ಕಟ್ಟಡ ಆಗಿದೆ, ನಾಡಾ ಕಚೇರಿ ಅಟಲ್ ಜನಸ್ನೇಹಿ ಕೇಂದ್ರ ಇಲ್ಲದೆ ಜನತೆಯ ಕಚೇರಿಯ ಕೆಲಸಗಳಿಗೆ ಸಮಸ್ಯೆಯಾಗಿತ್ತು. ಜನತೆಗೆ ಈ ಬಗೆಗೆ ಬೇಸರವು ಇತ್ತು. ನೂತನ ತಾಲ್ಲೂಕು ಕಟ್ಟಡದ ಲೋಕಾರ್ಪಣೆಯ ವೇಳೆ ಅಟಲ್ ಜನಸ್ನೇಹಿ ಕೇಂದ್ರ ಆರಂಭವಾಗಿರುವುದು ಅತ್ಯಂತ ಖುಷಿ ನೀಡಿದೆ. ಜನರ ಸೇವೆಗೆ ನಾವು ಸದಾ ಸಿದ್ಧ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದರು.
ಅವರು ಇಂದು ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ಆರಂಭಗೊAಡ ಅಟಲ್ ಜನಸ್ನೇಹಿ ಕೇಂದ್ರವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಹೆಬ್ರಿಯ ತಾಲ್ಲೂಕು ಆಡಳಿತಕ್ಕೆ ಸಂಬAಧಿಸಿದ ಬಹುತೇಕ ಕೆಲಸಗಳು, ಮೂಲ ಸೌಕರ್ಯಗಳನ್ನು ಈಗಾಗಲೆ ಪೂರೈಸಲಾಗಿದೆ. ಮುಂದೆ ತಾಲ್ಲೂಕು ಪಂಚಾಯಿತಿಗೆ ಸುಸಜ್ಜಿತ ಕಚೇರಿ ಕಟ್ಟಡ ನಿರ್ಮಾಣ ಸಹಿತ ಅಭಿವೃದ್ಧಿ ಕೆಲಸವನ್ನು ಅತೀ ಶೀಘ್ರವಾಗಿ ಮಾಡಲಾಗುತ್ತದೆ ಎಂದರು.
ಜನತೆಗೆ ತೀವ್ರವಾಗಿ ಸಮಸ್ಯೆಯಾಗಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಇತ್ಯರ್ಥ ಪಡಿಸುತ್ತಿದ್ದು, ರಾಜ್ಯದಲ್ಲಿ 6.50 ಲಕ್ಷ ಹೆಕ್ಟೇರ್ ಜಮೀನನ್ನು ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಿ ವಿರಹಿತಗೊಳಿಸಲಾಗುತ್ತಿದೆ, ಇದರಿಂದ ಜನತೆಗೆ ಹಕ್ಕು ಪತ್ರ ನೀಡುವುದು ಮತ್ತು ಸರ್ಕಾರಿ ವ್ಯವಸ್ಥೆಗಳಿಗೆ ಜಮೀನು ಕಾಯ್ದಿರಿಸುವ ಕಾರ್ಯ ಶೀಘ್ರವಾಗಿ ನಡೆಯಲಿದೆ ಎಂದರು.
ಹೆಬ್ರಿ ತಾಲೂಕಿನಲ್ಲಿ ಜನತೆ ಕಂದಾಯ ಸೇವೆಗಳನ್ನು ಪಡೆಯಲು ಕುಂದಾಪುರ ಮತ್ತು ಅಜೆಕಾರಿಗೆ ಹೋಗಬೆಕಿತ್ತು. ಇನ್ನು ಮುಂದೆ ಕಂದಾಯ ಇಲಾಖೆಯ ಸೇವೆಗಳು ತಾಲ್ಲೂಕಿನ 16 ಗ್ರಾಮಗಳ ಜನತೆಗೆ ಇಲ್ಲಿಯೇ ದೊರೆತು ಕೆಲಸಕ್ಕೆ ವೇಗ ದೊರೆಯಲಿದೆ ಎಂದು ತಹಶೀಲ್ದಾರ್ ಪುರಂದರ್ ತಿಳಿಸಿದರು.
ಹೆಬ್ರಿಗೆ ಬಹು ಅಗತ್ಯದ ಅಟಲ್ ಜನಸ್ನೇಹಿ ಕೇಂದ್ರವನ್ನು ಮಂಜೂರುಗೊಳಿಸಿದ ಸಚಿವರನ್ನು ಹೆಬ್ರಿ ತಾಲ್ಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಎಚ್. ಭಾಸ್ಕರ್ ಜೋಯಿಸ್ ಮತ್ತು ಕರಬೆಟ್ಟು ಸಂಜೀವ ಶೆಟ್ಟಿ ಅಭಿನಂದಿಸಿದರು.
ಹೆಬ್ರಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಾಲತಿ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕೆ.ಜಿ, ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹಲವರಿಗೆ ಪಿಂಚಣಿ ಯೋಜನೆ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು. ಪ್ರಕಾಶ್ ಪೂಜಾರಿ ಸ್ವಾಗತಿಸಿ, ನಿರೂಪಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…