Featured

ಉಡುಪಿ : ಜನರು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆಯಲ್ಲಿದ್ದಾರೆ: ಪ್ರಸಾದ್‌ರಾಜ್ ಕಾಂಚನ್  – Vishwanews24

ಉಡುಪಿ : ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಚುನಾವಣೆ ಎದುರಿಸುತ್ತಿಲ್ಲ ..

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮತ್ತು ತಂತ್ರಗಾರಿಕೆಯೇ ನಮಗೆ ಶ್ರೀರಕ್ಷೆ : ಪ್ರಸಾದ್‌ರಾಜ್ ಕಾಂಚನ್

ಉಡುಪಿ : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇವೆಯೇ ಹೊರತು ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಅಲ್ಲ. ಬಿಜೆಪಿ ಅಭ್ಯರ್ಥಿ ನಮ್ಮ ಸಮುದಾಯದವರೇ ಆದರೂ ಬುದ್ದಿವಂತರು, ವಿದ್ಯಾವಂತರಾಗಿರುವ ಈ ಕ್ಷೇತ್ರದ ಮತದಾರರು ತಮಗೆ ಸೂಕ್ತವಾದ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ತಿಂಗಳುನಿಂದ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇವೆ. ಈಗಾಗಲೇ 100 ಮಂದಿಯ ಕಮಿಟಿ ರಚನೆ ಮಾಡಿ ಕಾರ್ಯ ಪ್ರವೃತ್ತರಾಗಿದ್ದೇವೆ. ಚುನಾವಣಾ ಪ್ರಚಾರ ನಡೆಸಲು ಸಿದ್ಧರಾಗಿದ್ದೇವೆ. ನಾಳೆಯಿಂದ ಉಡುಪಿ ನಗರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯ ಆರಂಭಿಸುತ್ತಿದ್ದೇವೆ. ಈ ಚುನಾವಣೆಯನ್ನು ನಾವು ಸವಾಲಾಗಿ ತೆಗೆದುಕೊಂಡಿದ್ದೇವೆ ಎಂದರು.

ಜನರು ಬಿಜೆಪಿ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆಯಲ್ಲಿದ್ದಾರೆ. ಜನರಿಗೆ ಬೇಕಾದ ವಿದ್ಯಾವಂತ ಅಭ್ಯರ್ಥಿಗಳನ್ನೇ ಕಾಂಗ್ರೆಸ್ ಪಕ್ಷ ನೀಡಿದೆ. ಮನೆಮನೆ ನೀಡಿದಾಗ ಮತದಾರರು ಒಳ್ಳೆಯ ರೀತಿಯ ಸ್ಪಂದನೆ ಸ್ಪಂದನೆ ಕೊಡುತ್ತಿದ್ದಾರೆ ಎಂದು ಅವರು ಹೇಳಿದರು.

ನಾಮಪತ್ರವನ್ನು ಎ.17ರಂದು ಬೆಳಗ್ಗೆ 11.30ರ ಒಳಗೆ ಸಲ್ಲಿಸಲು ತೀರ್ಮಾನ ಮಾಡಿದ್ದೇನೆ. ನಾನು ರಾಜಕೀಯಕ್ಕೆ ಹೊಸಬ ಅಲ್ಲ. ನನ್ನ 26ನೇ ವರ್ಷ ವಯಸ್ಸಿನ ಗ್ರಾಮೀಣ ಕಾಂಗ್ರೆಸ್ನ ಅಧ್ಯಕ್ಷನಾಗಿದ್ದೇನೆ. ನಿರಂತರವಾಗಿ ನಾನು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಕಳೆದ ಗ್ರಾಪಂ ಚುನಾವಣೆಯಲ್ಲೂ ನಾನು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂಪೂರ್ಣ ಬೆಂಬಲ ದೊರೆತಿದೆ. ಅವರೇ ನಮ್ಮ ಬೆನ್ನೆಲುಬು ಎಂದು ಅವರು ತಿಳಿಸಿದರು.

ನಾನು ಶಾಸಕನಾಗಿ ಆಯ್ಕೆಯಾದರೆ ಎಲ್ಲ ವರ್ಗದವರ ಆರ್ಥಿಕ ಪ್ರಗತಿಗೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗುವುದು. ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ, ಆರೋಗ್ಯ ಕ್ಷೇತ್ರಗಳನ್ನು ಬಳಸಿಕೊಂಡು ಮುಂದಿನ ಪೀಳಿಗೆಗೆ ಅನುಕೂಲಕರವಾದ ವಾತಾವರಣವನ್ನು ಸೃಷ್ಠಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಪ್ರ.ಕಾರ್ಯದರ್ಶಿ ಕುಶಲ್ ಶೆಟ್ಟಿ, ವಕ್ತಾರ ಭಾಸ್ಕರ ರಾವ್ ಕಿದಿಯೂರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago