Featured

ಉಡುಪಿ : ಜನರು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆಯಲ್ಲಿದ್ದಾರೆ: ಪ್ರಸಾದ್‌ರಾಜ್ ಕಾಂಚನ್  – Vishwanews24

ಉಡುಪಿ : ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಚುನಾವಣೆ ಎದುರಿಸುತ್ತಿಲ್ಲ ..

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮತ್ತು ತಂತ್ರಗಾರಿಕೆಯೇ ನಮಗೆ ಶ್ರೀರಕ್ಷೆ : ಪ್ರಸಾದ್‌ರಾಜ್ ಕಾಂಚನ್

ಉಡುಪಿ : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇವೆಯೇ ಹೊರತು ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಅಲ್ಲ. ಬಿಜೆಪಿ ಅಭ್ಯರ್ಥಿ ನಮ್ಮ ಸಮುದಾಯದವರೇ ಆದರೂ ಬುದ್ದಿವಂತರು, ವಿದ್ಯಾವಂತರಾಗಿರುವ ಈ ಕ್ಷೇತ್ರದ ಮತದಾರರು ತಮಗೆ ಸೂಕ್ತವಾದ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ.

ಉಡುಪಿ ಕಾಂಗ್ರೆಸ್ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ತಿಂಗಳುನಿಂದ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇವೆ. ಈಗಾಗಲೇ 100 ಮಂದಿಯ ಕಮಿಟಿ ರಚನೆ ಮಾಡಿ ಕಾರ್ಯ ಪ್ರವೃತ್ತರಾಗಿದ್ದೇವೆ. ಚುನಾವಣಾ ಪ್ರಚಾರ ನಡೆಸಲು ಸಿದ್ಧರಾಗಿದ್ದೇವೆ. ನಾಳೆಯಿಂದ ಉಡುಪಿ ನಗರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯ ಆರಂಭಿಸುತ್ತಿದ್ದೇವೆ. ಈ ಚುನಾವಣೆಯನ್ನು ನಾವು ಸವಾಲಾಗಿ ತೆಗೆದುಕೊಂಡಿದ್ದೇವೆ ಎಂದರು.

ಜನರು ಬಿಜೆಪಿ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ನಿರೀಕ್ಷೆಯಲ್ಲಿದ್ದಾರೆ. ಜನರಿಗೆ ಬೇಕಾದ ವಿದ್ಯಾವಂತ ಅಭ್ಯರ್ಥಿಗಳನ್ನೇ ಕಾಂಗ್ರೆಸ್ ಪಕ್ಷ ನೀಡಿದೆ. ಮನೆಮನೆ ನೀಡಿದಾಗ ಮತದಾರರು ಒಳ್ಳೆಯ ರೀತಿಯ ಸ್ಪಂದನೆ ಸ್ಪಂದನೆ ಕೊಡುತ್ತಿದ್ದಾರೆ ಎಂದು ಅವರು ಹೇಳಿದರು.

ನಾಮಪತ್ರವನ್ನು ಎ.17ರಂದು ಬೆಳಗ್ಗೆ 11.30ರ ಒಳಗೆ ಸಲ್ಲಿಸಲು ತೀರ್ಮಾನ ಮಾಡಿದ್ದೇನೆ. ನಾನು ರಾಜಕೀಯಕ್ಕೆ ಹೊಸಬ ಅಲ್ಲ. ನನ್ನ 26ನೇ ವರ್ಷ ವಯಸ್ಸಿನ ಗ್ರಾಮೀಣ ಕಾಂಗ್ರೆಸ್ನ ಅಧ್ಯಕ್ಷನಾಗಿದ್ದೇನೆ. ನಿರಂತರವಾಗಿ ನಾನು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಕಳೆದ ಗ್ರಾಪಂ ಚುನಾವಣೆಯಲ್ಲೂ ನಾನು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂಪೂರ್ಣ ಬೆಂಬಲ ದೊರೆತಿದೆ. ಅವರೇ ನಮ್ಮ ಬೆನ್ನೆಲುಬು ಎಂದು ಅವರು ತಿಳಿಸಿದರು.

ನಾನು ಶಾಸಕನಾಗಿ ಆಯ್ಕೆಯಾದರೆ ಎಲ್ಲ ವರ್ಗದವರ ಆರ್ಥಿಕ ಪ್ರಗತಿಗೆ ಸಾಕಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗುವುದು. ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ, ಆರೋಗ್ಯ ಕ್ಷೇತ್ರಗಳನ್ನು ಬಳಸಿಕೊಂಡು ಮುಂದಿನ ಪೀಳಿಗೆಗೆ ಅನುಕೂಲಕರವಾದ ವಾತಾವರಣವನ್ನು ಸೃಷ್ಠಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಪ್ರ.ಕಾರ್ಯದರ್ಶಿ ಕುಶಲ್ ಶೆಟ್ಟಿ, ವಕ್ತಾರ ಭಾಸ್ಕರ ರಾವ್ ಕಿದಿಯೂರು ಉಪಸ್ಥಿತರಿದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago