ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜನರ ಬದುಕನ್ನು ಕಟ್ಟುವುದರೊಂದಿಗೆ ಶಾಂತಿ, ಸಾಮರಸ್ಯದಿಂದ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್ನ ಕೈ ಹಿಡಿಯಲಿದ್ದಾರೆ ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಹೇಳಿದರು.
ಅವರು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಗಳು ,ನಗರಸಭಾ ಸದಸ್ಥರು ಹಾಗೂ ನಗರಸಭೆಗೆ ಸ್ಪರ್ಧಿಸಿದ ಪಕ್ಷದ ಮುಂದಾಳುಗಳಿಗಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅನಿವಾಸಿ ಭಾರತೀಯರ ಕುಂದುಕೊರತೆಗಳ ಪರಿಹಾರಕ್ಕಾಗಿ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು. ಹಾಗೆಯೇ ರಾಜ್ಯದಲ್ಲಿ ಜನತೆಗೆ ನೀಡಿದ ಜನಪರ ಯೋಜನೆಗಳಿಂದ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಕಾಂಗ್ರೆಸ್ ಪಕ್ಷದ ಬಗ್ಗೆ ಇರುವ ಮತದಾರರ ಒಲವನ್ನು ಮತವಾಗಿ ಪರಿವರ್ತಿಸಲು ಪಕ್ಷದ ಚುನಾವಣಾ ಉಸ್ತುವಾರಿಗಳು ಬದ್ಧತೆಯಿಂದ ಶ್ರಮಿಸಬೇಕು ಎಂದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ.ಎ ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಕೆ.ಪಿ.ಸಿ.ಸಿ ವೀಕ್ಷಕ ನವೀನ್ ಶೆಟ್ಟಿ, ಪಕ್ಷದ ಚುನಾವಣಾ ಉಸ್ತುವಾರಿಗಳು, ನಗರಸಭಾ ಸದಸ್ಯರು ಹಾಗೂ ಪಕ್ಷದ ವಿವಿಧ ಮುಂದಾಳುಗಳು ಭಾಗವಹಿಸಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…