Featured

ಉಡುಪಿ :ಜನರ ಮನಸ್ಸನ್ನು ಬೇರೆ ಕಡೆ ಕೇಂದ್ರಿಕರಿಸಲು ಬಿಜೆಪಿಯವರು ಮಾಡುವ ಷಡ್ಯಂತ್ರಗಳಲ್ಲಿ ಹಿಜಾಬ್‌ ಕೂಡ ಒಂದು : ಕಾಪು ಯುವ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ ಸಾಲ್ಯಾನ್‌ ಆಕ್ರೋಶ – Vishwanews24

ಉಡುಪಿ : ಜನರ ಮನಸ್ಸನ್ನು ಬೇರೆ ಕಡೆ ಕೇಂದ್ರಿಕರಿಸಲು ಬಿಜೆಪಿಯವರು ಮಾಡುವ ಷಡ್ಯಂತ್ರಗಳಲ್ಲಿ ಹಿಜಾಬ್‌ ಕೂಡ ಅದೇ ಪುಸ್ತಕದ ಒಂದು ಕಥೆ : ಕಾಪು ಯುವ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ ಸಾಲ್ಯಾನ್‌ ಆಕ್ರೋಶ – Vishwanews24

ಉಡುಪಿ: ಹಿಜಾಬ್‌ ವಿಚಾರ ಬಿಜೆಪಿಗರ ವ್ಯವಸ್ಥಿತ ಹುನ್ನಾರವಾಗಿದೆ ಎಂದು ಕಾಪು ಯುವ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ ಸಾಲ್ಯಾನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯೋಜನೆಗಳು ಸಂಪೂರ್ಣ ವಿಫಲವಾದ ಜನರ ಮನಸ್ಸನ್ನು ಬೇರೆ ಕಡೆ ಕೇಂದ್ರಿಕರಿಸಲು ಬಿಜೆಪಿಯವರು ಮಾಡುವ ಷಡ್ಯಂತ್ರಗಳ ಹಲವಾರು ಆಗಿದ್ದು ಹಿಜಾಬ್‌ ಕೂಡ ಅದೇ ಪುಸ್ತಕದ ಒಂದು ಕಥೆಯಾಗಿದೆ. ಇತ್ತೀಚೆಗೆ ನಾರಾಯಣ ಗುರುಗಳ ಟ್ಯಾಬ್ಲೋ ವಿಚಾರವನ್ನು ಮರೆಮಾಚಲು ಹಿಜಾಬ್‌ ವಿಚಾರ ಮುಂದಿಟ್ಟು ಅವರ ರಾಜಕೀಯದ ದಾಳವಾಗಿ ಉಪಯೋಗಿಸುವುದು ನಿಜಕ್ಕೂ ಖಂಡನೀಯ. ವಿದ್ಯಾರ್ಥಿಗಳ ಜೀವನದಲ್ಲಿ ಓದಿನ ಬದಲು ಧರ್ಮದ ಅಮಲನ್ನು ಏರಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವ ವ್ಯವಸ್ಥಿತ ಅಜೇಂಡಾ ಆಗಿದೆ. ಅಲ್ಲದೆ ವಿನಾಕಾರಣ ಕಾಂಗ್ರೆಸ್‌ ನಾಯಕರ ಮೇಲೆ ಆರೋಪ ಮಾಡುವ ಬಿಜೆಪಿಗರ ವರ್ತನೆ ಖಂಡನೀಯವಾಗಿದೆ.

ಕೇಂದ್ರ ಸರಕಾರದ ವಿಫಲ ಬಜೆಟ್‌ ನ ಮರೆಮಾಚಲು ಕೂಡ ಹಿಜಾಬ್‌ ವಿಚಾರವನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತದೆ. ಸದಾ ಯುವಜನರ ಕುರಿತು ಮಾತನಾಡುವ ಮೋದಿಯವರ ಯುವ ಜನರ ಕಾಳಜಿ ಬಜೆಟ್‌ ಎಲ್ಲಿಯೂ ಕಾಣಿಸುತ್ತಿಲ್ಲ ಭಾಷಣಗಳಿಗೆ ಸೀಮಿತವಾಗಿರುವ ಮೋದಿಯವರ ಮಾತು ಬಿಜೆಪಿಗರು ಮನಸ್ಸನ್ನು ಬೇರೆ ಕಡೆ ವಿಕೇಂದ್ರಿಕರಿಸಲು ಹಿಜಾಬ್‌ ನಂತಹ ಅನಗತ್ಯ ವಿಷಯಗಳನ್ನು ಹುಟ್ಟು ಹಾಕಿ ಎತ್ತಿ ಹಿಡಿಯೋದು ಸರ್ವೆ ಸಾಮಾನ್ಯವಾಗಿದೆ. ಬಿಜೆಪಿಗರ ಇಂತಹ ಸಮಯಾನುಸಾರದ ಕಥೆಗಳನ್ನು ನಂಬಲು ಜನ ಇಲ್ಲಿ ಯಾರೂ ಮೂರ್ಖರಿಲ್ಲ. ವಿದ್ಯಾರ್ಥಿಗಳನ್ನು ಮುಂದೆ ಇಟ್ಟು ರಾಜಕೀಯವನ್ನು ಮಾಡುವುದನ್ನು ಬಿಟ್ಟು ನೀವೆ ಹುಟ್ಟಿಸಿದ ಹಿಜಾಬ್‌ ವಿಚಾರವನ್ನು ಸರಿಪಡಿಸಿ ಇಲ್ಲ ನಿಮ್ಮ ಸರಕಾರ ಕೊಟ್ಟಿರೋ ಆಶ್ವಾಸನೆಗೆಳನ್ನು ಈಡೇರಿಸಲಾಗದೆ ಬಿಜೆಪಿ ನಾಯಕರೂ ಕೂಡ ಹಿಜಾಬ್‌ ಹಾಕಿಕೊಂಡು ಓಡಾಡುವ ಸನ್ನಿವೇಶ ಬಂದೀತು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago