ಉಡುಪಿ: ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಾನು ಮಾಡಿದ ಸೇವಾ ಕಾರ್ಯಗಳಿಂದ ಜನ ನನಗೆ ಅವರ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ. ಇಂದು ನಾನು ಹೋದ ಎಲ್ಲಾ ಭಾಗಗಳಲ್ಲಿಯೂ ಜನ ನನ್ನನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ. ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್ ಅವರು ಹೇಳಿದರು.
ಉಡುಪಿ ಹಾಗೂ ಕುಂದಾಪುರ ಭಾಗಗಳಲ್ಲಿ ಬಾರ್ ಕೌನ್ಸಿಲ್, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಕಂಪನಿಗಳಲ್ಲಿ ಮೇ. 30 ರ ಗುರುವಾರ ಮತದಾರರ ಸಭೆ ನಡೆಸಿ ಮತ ಯಾಚಿಸಿದರು.
ಶಾಸಕನಾಗಿದ್ದಾಗ ಎಲ್ಲಾ ವರ್ಗದ ಜನತೆಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೆ. ಹಿಜಾಬ್ ವಿವಾದ ಬಂದಾಗ ಶಾಲೆಯ ಒಳಗೆ ಸಮಾನತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಸಮವಸ್ತ್ರಕ್ಕೆ ಆದ್ಯತೆ ನೀಡಲು ಒತ್ತಾಯಿಸಿದ್ದೆ. ಆ ವಿಚಾರದಲ್ಲಿ ನನ್ನನ್ನು ಇಂದು ವ್ಯಂಗ್ಯ ಮಾಡಿದವರಿಗೆ ಜನ ಉತ್ತರ ನೀಡುತ್ತಾರೆ. ಎಲ್ಲರೂ ಶಿಕ್ಷಣ ಪಡೆಯಬೇಕು. ಉತ್ತಮ ಶಿಕ್ಷಣ ಪಡೆದಾಗ ಸುಶಿಕ್ಷಿತ ಸಮಾಜದ ನಿರ್ಮಾಣ ಸಾಧ್ಯ ಎಂದು ಹೇಳಿದ ಅವರು ಇನ್ನೂ ಕೆಲಸ ಮಾಡುವ ತುಡಿತ ಇರುವ ನನಗೆ ಸೇವೆ ಮಾಡಲು ಹರಸಿ ಎಂದು ಪದವೀಧರರು, ವಕೀಲರು ಮತ್ತು ಶಿಕ್ಷಕರಲ್ಲಿ ಮನವಿ ಮಾಡಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…