Featured

ಉಡುಪಿ: ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ : ರಘುಪತಿ ಭಟ್ – vishwanews24

ಉಡುಪಿ: ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ : ರಘುಪತಿ ಭಟ್

ಉಡುಪಿ: ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಾನು ಮಾಡಿದ ಸೇವಾ ಕಾರ್ಯಗಳಿಂದ ಜನ ನನಗೆ ಅವರ ಮನಸ್ಸಿನಲ್ಲಿ ಸ್ಥಾನ ನೀಡಿದ್ದಾರೆ. ಇಂದು ನಾನು ಹೋದ ಎಲ್ಲಾ ಭಾಗಗಳಲ್ಲಿಯೂ ಜನ ನನ್ನನ್ನು ಪ್ರೀತಿಯಿಂದ ಬರಮಾಡಿಕೊಳ್ಳುತ್ತಿದ್ದಾರೆ. ಜನರ ಮನಸ್ಸಿನಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ‌ ಕೆ. ರಘುಪತಿ ಭಟ್ ಅವರು‌ ಹೇಳಿದರು.

ಉಡುಪಿ ಹಾಗೂ ಕುಂದಾಪುರ ಭಾಗಗಳಲ್ಲಿ ಬಾರ್ ಕೌನ್ಸಿಲ್, ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಕಂಪನಿಗಳಲ್ಲಿ ಮೇ. 30 ರ ಗುರುವಾರ ಮತದಾರರ ಸಭೆ ನಡೆಸಿ ಮತ ಯಾಚಿಸಿದರು.

ಶಾಸಕನಾಗಿದ್ದಾಗ ಎಲ್ಲಾ ವರ್ಗದ ಜನತೆಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದೆ. ಹಿಜಾಬ್ ವಿವಾದ ಬಂದಾಗ ಶಾಲೆಯ ಒಳಗೆ ಸಮಾನತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಸಮವಸ್ತ್ರಕ್ಕೆ ಆದ್ಯತೆ ನೀಡಲು ಒತ್ತಾಯಿಸಿದ್ದೆ. ಆ ವಿಚಾರದಲ್ಲಿ ನನ್ನನ್ನು ಇಂದು ವ್ಯಂಗ್ಯ ಮಾಡಿದವರಿಗೆ ಜನ ಉತ್ತರ ನೀಡುತ್ತಾರೆ. ಎಲ್ಲರೂ ಶಿಕ್ಷಣ ಪಡೆಯಬೇಕು. ಉತ್ತಮ ಶಿಕ್ಷಣ ಪಡೆದಾಗ ಸುಶಿಕ್ಷಿತ ಸಮಾಜದ ನಿರ್ಮಾಣ ಸಾಧ್ಯ ಎಂದು ಹೇಳಿದ ಅವರು ಇನ್ನೂ ಕೆಲಸ ಮಾಡುವ ತುಡಿತ ಇರುವ ನನಗೆ ಸೇವೆ ಮಾಡಲು ಹರಸಿ ಎಂದು ಪದವೀಧರರು, ವಕೀಲರು ಮತ್ತು ಶಿಕ್ಷಕರಲ್ಲಿ ಮನವಿ ಮಾಡಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

22 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

22 hours ago