Featured

ಉಡುಪಿ: ಜಮೀನಿನ ಪಹಣಿಗೆ ಆಧಾರ್‌ ಜೋಡಣೆ ಕಡ್ಡಾಯ: ಡಿಸಿ ಡಾ| ಕೆ. ವಿದ್ಯಾಕುಮಾರಿ – vishwanews24

ಉಡುಪಿ: ಜಮೀನಿನ ಪಹಣಿಗೆ ಆಧಾರ್‌ ಜೋಡಣೆ ಕಡ್ಡಾಯ: ಡಿಸಿ ಡಾ| ಕೆ. ವಿದ್ಯಾಕುಮಾರಿ

ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್‌ ಮಾಡುವ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈ ವರೆಗೆ ಶೇ. 65 ಮಾತ್ರ ಪ್ರಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್‌ ಮಾಡುವ ಬಗ್ಗೆ ಸರಕಾರದ ನಿರ್ದೇಶನವಿದೆ. ಜಿಲ್ಲೆಯ ಕೆಲವೊಂದು ನಾಗರಿಕರು ಆಧಾರ್‌ ಲಿಂಕ್‌ ಮಾಡಲು ಹಿಂಜರಿಯುತ್ತಿದ್ದು, ಇದರಿಂದ ನಿಗದಿತ ಪ್ರಗತಿ ಸಾಧಿಸಲು ಅಸಾಧ್ಯವಾಗಿದೆ.
ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್‌ ಜೋಡಣೆ ಆವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗೆ ಪಹಣಿ, ಆಧಾರ್‌ ದಾಖಲಾತಿಗಳೊಂದಿಗೆ ಹಾಗೂ ಆಧಾರ್‌ ಜೋಡಣೆಯಾಗಿರುವ ಮೊಬೈಲ್‌ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್‌ ಜೋಡಣೆ ಮಾಡಿಸಿಕೊಳ್ಳಬಹುದು.
ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲಕರು ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಅವರಿಂದ ಮಾಹಿತಿ ಪಡೆದು ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್‌ ಜೋಡಣೆ ಮಾಡಿಸಬೇಕು. ಈ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು, ಸೈಬರ್‌, ಗ್ರಾಮ ಒನ್‌ ಸೆಂಟರ್‌ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇಲ್ಲ.

 

ಈವರೆಗೆ ಆಧಾರ್‌ ಜೋಡಣೆ ಮಾಡದಿರುವ ಭೂಮಾಲಕರು ಮುಂದಿನ ದಿನಗಳಲ್ಲಿ ಸರಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್‌ ಜೋಡಣೆ ಮಾಡದಿರುವ ಭೂಮಾಲಕರು ತತ್‌ಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್‌ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago