Featured

ಉಡುಪಿ : ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದತಿ ತೀರ್ಮಾನ ಎತ್ತಿ ಹಿಡಿದ ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯ : ದಾವೂದ್ ಅಬೂಬಕ್ಕರ್ – vishwanews24

ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದತಿ ತೀರ್ಮಾನ ಎತ್ತಿ ಹಿಡಿದ ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯ : ದಾವೂದ್ ಅಬೂಬಕ್ಕರ್

ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ನಾಗರಿಕರು ಯಾವುದೇ ಜೀವ ಭಯ ಇಲ್ಲದೆ ಬದುಕುವಂತೆ ಮಾಡಿದ್ದ 370ನೇ ವಿಧಿ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಉಡುಪಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ದಾವೂದ್ ಅಬೂಬಕ್ಕರ್ ಸ್ವಾಗತಿಸಿದ್ದಾರೆ.

ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ. ನ್ಯಾಯ ಸಮ್ಮತ ತೀರ್ಪಿನಿಂದ ದೇಶದ ಏಕತೆ ಮತ್ತು ಅಖಂಡತೆಗೆ ಸವಾಲು ಒಡ್ಡಿದ್ದ ವಿಭಜನಕಾರಿ ಕಾಂಗ್ರೆಸ್ಸಿಗೆ ತಾನು ಮಾಡಿದ ತುಷ್ಠಿಕರಣ ನೀತಿ ಈಗ ಮಗ್ಗುಲ ಮುಳ್ಳಾಗಿದೆ ಎಂದು ಅಬೂಬಕ್ಕರ್ ತಿಳಿಸಿದ್ದಾರೆ.

ದೇಶ ವಿಭಜನೆಯ ಕರಾಳ ಇತಿಹಾಸ ಸೃಷ್ಟಿಸಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದರೆ ಪುನಃ 370ನೇ ವಿಧಿಯನ್ನು ಜಾರಿಗೆ ತರುತ್ತೇವೆ ಎನ್ನುತ್ತಿರುವುದು ಕಾಂಗ್ರೆಸ್ಸಿಗೆ ಸುಪ್ರೀಂ ಕೋರ್ಟ್ ಕೂಡ ತಪರಾಕಿ ನೀಡಿದಂತಾಗಿದೆ.

ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆಗೆ ನಾಂದಿ ಹಾಡಿರುವ 370ನೇ ವಿಧಿ ರದ್ದತಿ ನಿರ್ಣಯಕ್ಕೆ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಮಾನ್ಯತೆಯ ಮುದ್ರೆ ಒತ್ತಿರುವುದು ಮೋದಿ ಸರಕಾರದ ದಿಟ್ಟ ಸಾಧನೆಗೆ ದೇಶದ ಜನತೆ ಶ್ಲಾಘಿಸುವುದು ಶತಸಿದ್ದ ಎಂದು ಅಬೂಬಕ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

23 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago