ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ನಾಗರಿಕರು ಯಾವುದೇ ಜೀವ ಭಯ ಇಲ್ಲದೆ ಬದುಕುವಂತೆ ಮಾಡಿದ್ದ 370ನೇ ವಿಧಿ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಉಡುಪಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ದಾವೂದ್ ಅಬೂಬಕ್ಕರ್ ಸ್ವಾಗತಿಸಿದ್ದಾರೆ.
ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ. ನ್ಯಾಯ ಸಮ್ಮತ ತೀರ್ಪಿನಿಂದ ದೇಶದ ಏಕತೆ ಮತ್ತು ಅಖಂಡತೆಗೆ ಸವಾಲು ಒಡ್ಡಿದ್ದ ವಿಭಜನಕಾರಿ ಕಾಂಗ್ರೆಸ್ಸಿಗೆ ತಾನು ಮಾಡಿದ ತುಷ್ಠಿಕರಣ ನೀತಿ ಈಗ ಮಗ್ಗುಲ ಮುಳ್ಳಾಗಿದೆ ಎಂದು ಅಬೂಬಕ್ಕರ್ ತಿಳಿಸಿದ್ದಾರೆ.
ದೇಶ ವಿಭಜನೆಯ ಕರಾಳ ಇತಿಹಾಸ ಸೃಷ್ಟಿಸಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದರೆ ಪುನಃ 370ನೇ ವಿಧಿಯನ್ನು ಜಾರಿಗೆ ತರುತ್ತೇವೆ ಎನ್ನುತ್ತಿರುವುದು ಕಾಂಗ್ರೆಸ್ಸಿಗೆ ಸುಪ್ರೀಂ ಕೋರ್ಟ್ ಕೂಡ ತಪರಾಕಿ ನೀಡಿದಂತಾಗಿದೆ.
ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆಗೆ ನಾಂದಿ ಹಾಡಿರುವ 370ನೇ ವಿಧಿ ರದ್ದತಿ ನಿರ್ಣಯಕ್ಕೆ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಮಾನ್ಯತೆಯ ಮುದ್ರೆ ಒತ್ತಿರುವುದು ಮೋದಿ ಸರಕಾರದ ದಿಟ್ಟ ಸಾಧನೆಗೆ ದೇಶದ ಜನತೆ ಶ್ಲಾಘಿಸುವುದು ಶತಸಿದ್ದ ಎಂದು ಅಬೂಬಕ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…