ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ನಾಗರಿಕರು ಯಾವುದೇ ಜೀವ ಭಯ ಇಲ್ಲದೆ ಬದುಕುವಂತೆ ಮಾಡಿದ್ದ 370ನೇ ವಿಧಿ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಉಡುಪಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ದಾವೂದ್ ಅಬೂಬಕ್ಕರ್ ಸ್ವಾಗತಿಸಿದ್ದಾರೆ.
ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ. ನ್ಯಾಯ ಸಮ್ಮತ ತೀರ್ಪಿನಿಂದ ದೇಶದ ಏಕತೆ ಮತ್ತು ಅಖಂಡತೆಗೆ ಸವಾಲು ಒಡ್ಡಿದ್ದ ವಿಭಜನಕಾರಿ ಕಾಂಗ್ರೆಸ್ಸಿಗೆ ತಾನು ಮಾಡಿದ ತುಷ್ಠಿಕರಣ ನೀತಿ ಈಗ ಮಗ್ಗುಲ ಮುಳ್ಳಾಗಿದೆ ಎಂದು ಅಬೂಬಕ್ಕರ್ ತಿಳಿಸಿದ್ದಾರೆ.
ದೇಶ ವಿಭಜನೆಯ ಕರಾಳ ಇತಿಹಾಸ ಸೃಷ್ಟಿಸಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದರೆ ಪುನಃ 370ನೇ ವಿಧಿಯನ್ನು ಜಾರಿಗೆ ತರುತ್ತೇವೆ ಎನ್ನುತ್ತಿರುವುದು ಕಾಂಗ್ರೆಸ್ಸಿಗೆ ಸುಪ್ರೀಂ ಕೋರ್ಟ್ ಕೂಡ ತಪರಾಕಿ ನೀಡಿದಂತಾಗಿದೆ.
ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆಗೆ ನಾಂದಿ ಹಾಡಿರುವ 370ನೇ ವಿಧಿ ರದ್ದತಿ ನಿರ್ಣಯಕ್ಕೆ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಮಾನ್ಯತೆಯ ಮುದ್ರೆ ಒತ್ತಿರುವುದು ಮೋದಿ ಸರಕಾರದ ದಿಟ್ಟ ಸಾಧನೆಗೆ ದೇಶದ ಜನತೆ ಶ್ಲಾಘಿಸುವುದು ಶತಸಿದ್ದ ಎಂದು ಅಬೂಬಕ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…