Featured

ಉಡುಪಿ  : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24

ಉಡುಪಿ  : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24

ಉಡುಪಿ : ಜಲಶಕ್ತಿ ಯೋಜನೆಯ ಮೂಲಕ ಮಳೆ ನೀರನ್ನು ಸಂಗ್ರಹಿಸಿ ಜಿಲ್ಲೆಯಲ್ಲಿ ಅಂರ್ತಜಲ ಮಟ್ಟವನ್ನು ವೃಧ್ದಿಸಲು ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ನಡದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ಗ್ರಾಮಗಳಲ್ಲಿರುವ ಕೆರೆಗಳ ಹೊಳೆತ್ತುವಿಕೆ , ಬಾವಿಗಳ ನಿರ್ಮಾಣ, ಕೊಳವೆ ಬಾವಿಗಳಿಗೆ ಜಲ ಮರುಪೂರಣ , ತೋಡುಗಳ ನಿರ್ಮಾಣ ಮಾಡುವ ಮೂಲಕ ಮಳೆ ನೀರನ್ನು ಸಂಗ್ರಹಿಸುವ ಮೂಲಕ ಅಂರ್ತಜಲವನ್ನು ವೃದ್ದಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ, ಮಹಾತ್ಮ ಗಾಂಧೀ ಉದ್ಯೋಗ ಖಾತರಿ ಯೋಜನೆಯಡಿ ಈ ಕಾರ್ಯಕ್ರಮಗಳನ್ನು ಕೈಗೊಳ್ಳಲು ಅವಕಾಶವಿದ್ದು, ಇದರಿಂದ ಮಾನವ ದಿನಗಳ ಸೃಷ್ಠಿ ಸಹ ಸಾಧ್ಯವಾಗಲಿದೆ ಎಂದು ಎಲ್ಲಾ ಅಧಿಕಾರಿಗಳಿಗೆ ದಿನಕರ ಬಾಬು ಸೂಚನೆ ಜಿಲ್ಲೆಯಲ್ಲಿ ಈ ಯೋಜನೆಯಡಿ ಇದುವರೆಗೆ 65 ಕೆರೆಗಳ ಹೊಳು ತೆಗೆಯಲಾಗಿದೆ ಎಂದರು.

ಕೋವಿಡ್ ಲಸಿಕೆ ಪಡೆಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ದಿಯಾಗಿ, ಸೋಂಕು ತಗುಲಿದರೆ ಅದರ ತೀವ್ರತೆ ಕಡಿಮೆಯಿರಲಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಿ, ಲಸಿಕೆ ಕೊರತೆಯಾದಂತೆ ಎಚ್ಚರವಹಿಸಿ , ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾರ್ವಜನಿಕರಿಗೆ ಜಗೃತಿ ಮೂಡಿಸಿ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು

ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿಗೆ ಭಿತ್ತನೆ ಬೀಜ ಮತ್ತು ರಸಗೊಬ್ಬರದ ಸೂಕ್ತ ದಾಸ್ತಾನು ಹೊಂದಿರುವAತೆ ಸೂಚಿಸಿದ ದಿನಕರ ಬಾಬು, ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುತ್ತಿರುವ ಬಗ್ಗೆ ಮಾಹಿತಿ ಪಡೆದರು. ಕಾರ್ಕಳ ತಾಲೂಕು ಸೂಡಾ ಗ್ರಾವiದ ಪಿಲಾರ್ ಖಾನ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶೋಭಾ ಜಿ ಪುತ್ರನ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ , ಮುಖ್ಯ ಯೋಜನಾಧಿಕಾರಿ ಶ್ರ‍್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

22 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago