Featured

ಉಡುಪಿ:  ಜಾಗ ಖರೀದಿಗೆ  ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ; ಪ್ರಕರಣ ದಾಖಲು – vishwanews24

ಉಡುಪಿ:  ಜಾಗ ಖರೀದಿಗೆ  ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ; ಪ್ರಕರಣ ದಾಖಲು

ಉಡುಪಿ: ಜಾಗದ ಖರೀದಿಗೆ ಮುಂಗಡ ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ಮತ್ತು ಅಕ್ರಮ ಎಸಗಿದ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಬಲಪಾಡಿ ಪಂದುಬೆಟ್ಟು ನಿವಾಸಿ ಮನೋಹರ್‌ ಎಸ್‌. ಕಲ್ಮಾಡಿ ಇವರಿಗೆ ರಾಮಣ್ಣ ಪರಿಚಯಸ್ಥರಾಗಿದ್ದರು. ಶಿವಳ್ಳಿ ಗ್ರಾಮದ ತನ್ನ ಆಸ್ತಿ ಮಾರಾಟದ ಪ್ರಸ್ತಾವನೆಯನ್ನು ಅವರು ಮನೋಹರ್‌ ಮುಂದಿರಿಸಿದ್ದರು. ಈ ಬಗ್ಗೆ ಅವರಿಬ್ಬರು ಜಾಗ ನೋಡಿ ಬಂದಿದ್ದರು. ಜಾಗ ಮಾರಾಟಕ್ಕೆ ರಾಮಣ್ಣ ತನ್ನ ತಂಗಿಯರಾದ ಸುಮತಿ ಮತ್ತು ರಮಣಿ ಒಪ್ಪಿರುವುದಾಗಿ ಖರೀದಿದಾರರಲ್ಲಿ ತಿಳಿಸಿದ್ದರು.

2012ರ ಜ. 6ರಂದು ಕುಂಜಿಬೆಟ್ಟಿನ ಆಫೀಸ್‌ನಲ್ಲಿ ಅಗ್ರಿಮೆಂಟ್‌ಗೆ ಸಹಿ ಹಾಕಿಸಿ ಮುಂಗಡವಾಗಿ ರಾಮಣ್ಣರಿಗೆ 10 ಲಕ್ಷ ರೂ. ಹಾಗೂ ತಲಾ 2 ಲಕ್ಷ ರೂ.ಗಳನ್ನು ಸುಮತಿ ಮತ್ತು ರಮಣಿ ಅವರ ಮನೆಗೆ ಹೋಗಿ ಮನೋಹರ್‌ ನೀಡಿದ್ದರು. 3 ತಿಂಗಳ ಅನಂತರ ಸುಮತಿ ಶೆಟ್ಟಿಯವರ ಮಗ ಆ ಆಸ್ತಿಯಲ್ಲಿ ಭಾಗ ಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ರಾಮಣ್ಣರಲ್ಲಿ ಕೇಳಿದಾಗ ಎಲ್ಲ ದಾಖಲಾತಿ ಸರಿಪಡಿಸುವುದು ಮತ್ತು ಪ್ರಕರಣ ವಾಪಸ್‌ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ಜಾಗದ ನೋಂದಣಿ ಬಗ್ಗೆ ಪ್ರಸ್ತಾವಿಸಿದಾಗ ರಾಮಣ್ಣ ನೋಂದಣಿಗೆ ದಿನ ಮುಂದೂಡುತ್ತಿದ್ದರು. ಇದರಿಂದ ಬೇಸತ್ತು ಖರೀದಿದಾರರು ರಾಮಣ್ಣ ಮತ್ತು ಸಹೋದರಿಯರಿಗೆ ನೋಟಿಸ್‌ ಜಾರಿ ಮಾಡಿದ್ದರು. ಈ ಬಗ್ಗೆ ರಾಮಣ್ಣ ಫಿರ್ಯಾದುದಾರರನ್ನು ಉದ್ದೇಶಿಸಿ ಜಾಗ ಕೊಡುವುದಿಲ್ಲ, ನಿನಗೆ ಮೋಸ ಮಾಡುವ ಉದ್ದೇಶದಿಂದಲೆ ಅಗ್ರಿಮೆಂಟ್‌ ಮಾಡಿಸಿದ್ದು ಎಂದು ಬೈದರಲ್ಲದೇ ಜಾಗದ ಬಗ್ಗೆ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

24 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

55 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

1 hour ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

4 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

18 hours ago