ಉಡುಪಿ: ಜಾಗದ ಖರೀದಿಗೆ ಮುಂಗಡ ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ಮತ್ತು ಅಕ್ರಮ ಎಸಗಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಬಲಪಾಡಿ ಪಂದುಬೆಟ್ಟು ನಿವಾಸಿ ಮನೋಹರ್ ಎಸ್. ಕಲ್ಮಾಡಿ ಇವರಿಗೆ ರಾಮಣ್ಣ ಪರಿಚಯಸ್ಥರಾಗಿದ್ದರು. ಶಿವಳ್ಳಿ ಗ್ರಾಮದ ತನ್ನ ಆಸ್ತಿ ಮಾರಾಟದ ಪ್ರಸ್ತಾವನೆಯನ್ನು ಅವರು ಮನೋಹರ್ ಮುಂದಿರಿಸಿದ್ದರು. ಈ ಬಗ್ಗೆ ಅವರಿಬ್ಬರು ಜಾಗ ನೋಡಿ ಬಂದಿದ್ದರು. ಜಾಗ ಮಾರಾಟಕ್ಕೆ ರಾಮಣ್ಣ ತನ್ನ ತಂಗಿಯರಾದ ಸುಮತಿ ಮತ್ತು ರಮಣಿ ಒಪ್ಪಿರುವುದಾಗಿ ಖರೀದಿದಾರರಲ್ಲಿ ತಿಳಿಸಿದ್ದರು.
2012ರ ಜ. 6ರಂದು ಕುಂಜಿಬೆಟ್ಟಿನ ಆಫೀಸ್ನಲ್ಲಿ ಅಗ್ರಿಮೆಂಟ್ಗೆ ಸಹಿ ಹಾಕಿಸಿ ಮುಂಗಡವಾಗಿ ರಾಮಣ್ಣರಿಗೆ 10 ಲಕ್ಷ ರೂ. ಹಾಗೂ ತಲಾ 2 ಲಕ್ಷ ರೂ.ಗಳನ್ನು ಸುಮತಿ ಮತ್ತು ರಮಣಿ ಅವರ ಮನೆಗೆ ಹೋಗಿ ಮನೋಹರ್ ನೀಡಿದ್ದರು. 3 ತಿಂಗಳ ಅನಂತರ ಸುಮತಿ ಶೆಟ್ಟಿಯವರ ಮಗ ಆ ಆಸ್ತಿಯಲ್ಲಿ ಭಾಗ ಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ರಾಮಣ್ಣರಲ್ಲಿ ಕೇಳಿದಾಗ ಎಲ್ಲ ದಾಖಲಾತಿ ಸರಿಪಡಿಸುವುದು ಮತ್ತು ಪ್ರಕರಣ ವಾಪಸ್ ತೆಗೆದುಕೊಳ್ಳುವುದಾಗಿ ಹೇಳಿದ್ದರು.
ಜಾಗದ ನೋಂದಣಿ ಬಗ್ಗೆ ಪ್ರಸ್ತಾವಿಸಿದಾಗ ರಾಮಣ್ಣ ನೋಂದಣಿಗೆ ದಿನ ಮುಂದೂಡುತ್ತಿದ್ದರು. ಇದರಿಂದ ಬೇಸತ್ತು ಖರೀದಿದಾರರು ರಾಮಣ್ಣ ಮತ್ತು ಸಹೋದರಿಯರಿಗೆ ನೋಟಿಸ್ ಜಾರಿ ಮಾಡಿದ್ದರು. ಈ ಬಗ್ಗೆ ರಾಮಣ್ಣ ಫಿರ್ಯಾದುದಾರರನ್ನು ಉದ್ದೇಶಿಸಿ ಜಾಗ ಕೊಡುವುದಿಲ್ಲ, ನಿನಗೆ ಮೋಸ ಮಾಡುವ ಉದ್ದೇಶದಿಂದಲೆ ಅಗ್ರಿಮೆಂಟ್ ಮಾಡಿಸಿದ್ದು ಎಂದು ಬೈದರಲ್ಲದೇ ಜಾಗದ ಬಗ್ಗೆ ಕೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…