Featured

ಉಡುಪಿ:  ಜಾನುವಾರುಗಳಿಗೆ ಉಚಿತ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಲಭ್ಯ – Vishwanews24

ಉಡುಪಿ:  ಜಾನುವಾರುಗಳಿಗೆ ಉಚಿತ ತುರ್ತು ಚಿಕಿತ್ಸೆ; 8 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಲಭ್ಯ

ಉಡುಪಿ: ಎರಡೂವರೆ ವರ್ಷದ ಹಿಂದೆ ಲೋಕಾರ್ಪಣೆಗೊಂಡು, ಕಾರಣಾಂತರಗಳಿಂದ ಸೇವೆಗೆ ಲಭ್ಯವಾಗದ ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಕಳೆದ ಆಗಸ್ಟ್‌ನಿಂದ ಪ್ರಾಯೋಗಿಕವಾಗಿ ಜಾರಿಗೊಂಡು ಇದೀಗ ಪೂರ್ಣ ಪ್ರಮಾಣದಲ್ಲಿ ಜಾನುವಾರುಗಳ ಉಚಿತ ಚಿಕಿತ್ಸೆಗೆ ಲಭ್ಯವಾಗುತ್ತಿದೆ. ಈಗಾಗಲೇ ಜಿಲ್ಲೆಯ 1,723 ಜಾನುವಾರುಗಳಿಗೆ ಈ ಮೂಲಕ ತುರ್ತು ಚಿಕಿತ್ಸಾ ಸೇವೆ ಒದಗಿಸಲಾಗಿದೆ.

ಕೇಂದ್ರ ಸರಕಾರದ “ಪಶು ಸಂಜೀವಿನಿ ಯೋಜನೆ’ಯ ಮೊಬೈಲ್‌ ವೆಟರ್ನರಿ ಕ್ಲಿನಿಕ್‌ (ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ) ಗ್ರಾಮೀಣ ಪ್ರದೇಶದ ಜಾನುವಾರುಗಳಿರುವ ಮನೆ ಹೋಗಿ ಚಿಕಿತ್ಸೆ ನೀಡುತ್ತಿದೆ.

ಪಶು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿ 2022ರ ಜುಲೈನಲ್ಲಿ ಲೋಕಾರ್ಪಣೆಗೊಂಡಿದ್ದ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನಗಳು ಟೆಂಡರ್‌ ಸಹಿತ ಇನ್ನಿತರ ತಾಂತ್ರಿಕ ಸಮಸ್ಯೆಯಿಂದ ಸೇವೆ ಆರಂಭಿ ಸಲು ವಿಳಂಬವಾಗಿತ್ತು.

ಇದೀಗ ಎಲ್ಲ ಸಮಸ್ಯೆಗಳು ಬಗೆಹರಿದು ಜಾನುವಾರುಗಳ ಚಿಕಿತ್ಸೆಗೆ ಲಭ್ಯವಾಗಿದೆ. ಪ್ರತೀ ವಾಹನದಲ್ಲಿ ಒಬ್ಬರು ಪಶು ವೈದ್ಯರು, ಒಬ್ಬರು ಸಹಾಯಕ, ಚಾಲಕ ಸಹಿತ ಒಟ್ಟು ಮೂವರು ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಗೆ 8 ಪಶು ಸಂಜೀವಿನಿ ಆ್ಯಂಬುಲೆನ್ಸ್‌ ದೊರೆತಿದ್ದು, 7 ತಾಲೂಕಿಗೆ ತಲಾ ಒಂದು ಆ್ಯಂಬುಲೆನ್ಸ್‌ ಒದಗಿಸಲಾಗಿದ್ದು, ಒಂದು ಆ್ಯಂಬುಲೆನ್ಸ್‌ ಜಿಲ್ಲಾ ಕೇಂದ್ರಕ್ಕೆ ನೀಡಲಾಗಿದೆ. ಇದರಲ್ಲಿ ಎಲ್ಲ ರೀತಿಯ ಔಷಧ, ಶಸ್ತ್ರಚಿಕಿತ್ಸೆ ಪರಿಕರಗಳು ಲಭ್ಯವಿದೆ. ಡಿಸೆಂಬರ್‌ನಲ್ಲಿ 295, ಜನವರಿಯಲ್ಲಿ 497, ಫೆಬ್ರವರಿಯಲ್ಲಿ 591 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿದೆ.

1962ಕ್ಕೆ ಕರೆ ಮಾಡಿ
ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಗ್ರಾಮೀಣ ಪ್ರದೇಶದ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದಾಗ ಅವುಗಳಿಗೆ ತುರ್ತು ಸೇವೆ ನೀಡಲು 1962 ಸಂಖ್ಯೆಯ ಸಹಾಯವಾಣಿ ರೂಪಿಸಿದೆ. ಗ್ರಾಮೀಣ ಭಾಗದಲ್ಲಿ ಜಾನುವಾರುಗಳ ಆರೋಗ್ಯದಲ್ಲಿ ಯಾವುದೇ ರೀತಿಯ ಏರುಪೇರು ಕಂಡು ಬಂದರೆ, ಕರೆ ಮಾಡಿದ ಕೆಲವೇ ಸಮಯದಲ್ಲಿ ವಾಹನಗಳು ಸಾಮಾನ್ಯ ಆ್ಯಂಬುಲೆನ್ಸ್‌ನಂತೆ ಸ್ಥಳಕ್ಕೆ ಧಾವಿಸಿ, ಸ್ಥಳದಲ್ಲಿಯೇ ಜಾನುವಾರುಗಳಿಗೆ ಚಿಕಿತ್ಸೆ ಒದಗಿಸಲಾಗುವುದು ಎಂದು ಪಶು ಸಂಜೀವಿನಿ ಜಿಲ್ಲಾ ಸಂಯೋಜಕ ಡಾ| ಸರ್ವೋತ್ತಮ ಉಡುಪ ತಿಳಿಸಿದ್ದಾರೆ.

ಪೂರ್ಣಪ್ರಮಾಣದಲ್ಲಿ ಸೇವೆ
ಜಿಲ್ಲೆಯ 7 ತಾಲೂಕು ಸಹಿತ ಜಿಲ್ಲಾ ಕೇಂದ್ರವು ಸೇರಿ 8 ಪಶು ಸಂಜೀವಿನಿ ಸಂಚಾರಿ ತುರ್ತು ಚಿಕಿತ್ಸ ವಾಹನಗಳು ಪೂರ್ಣ ಪ್ರಮಾಣದಲ್ಲಿ ಸೇವೆ ನೀಡುತ್ತಿದೆ. ಗ್ರಾಮೀಣ ಭಾಗದಿಂದ ಜಾನುವಾರುಗಳ ಅನಾರೋಗ್ಯಕ್ಕೆ ಸಂಬಂಧಿಸಿ ಕರೆಗಳೂ ಬರುತ್ತಿದ್ದು, ಪಶು ವೈದ್ಯರು, ಪ್ಯಾರಾ ಮೆಡಿಕಲ್‌ ಅಸಿಸ್ಟೆಂಟ್‌, ವಾಹನ ಚಾಲಕ ಸಹಿತ ಸಿಬಂದಿ ತಂಡವು ತುರ್ತಾಗಿ ಧಾವಿಸಿ ಜಾನುವಾರುಗಳಿಗೆ ಚಿಕಿತ್ಸೆ ನೀಡುತ್ತಿದೆ.
ಡಾ| ರೆಡ್ಡಪ್ಪ , ಉಪ ನಿರ್ದೇಶಕರು,
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

31 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

41 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

1 hour ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago