Featured

ಉಡುಪಿ :  ಜಾನುವಾರುಗಳಿಗೆ “ಲುಂಪಿ’ ಚರ್ಮ ಸೋಂಕಿನ ಆತಂಕ : ಕರಾವಳಿಯಲ್ಲಿ ಮುನ್ನೆಚ್ಚರಿಕೆ ಲಸಿಕೆ ದಾಸ್ತಾನು – Vishwanews24

ಉಡುಪಿ :  ಜಾನುವಾರುಗಳಿಗೆ “ಲುಂಪಿ’ ಚರ್ಮ ಸೋಂಕಿನ ಆತಂಕ : ಕರಾವಳಿಯಲ್ಲಿ ಮುನ್ನೆಚ್ಚರಿಕೆ ಲಸಿಕೆ ದಾಸ್ತಾನು

ಉಡುಪಿ : ಚರ್ಮ ಗಂಟು ರೋಗ (ಲುಂಪಿ) ಸೋಂಕಿಗೆ ದೇಶದ ವಿವಿಧ ಕಡೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜಾನುವಾರುಗಳು ಅಸುನೀಗಿವೆ. ಕರಾವಳಿಯಲ್ಲಿ ಇದುವರೆಗೆ ಯಾವುದೇ ಪ್ರಕರಣ ವರದಿ ಯಾಗಿಲ್ಲವಾದರೂ ಪಶು ಸಂಗೋಪನೆ ಇಲಾಖೆ ಮುಂಜಾಗ್ರತೆ ವಹಿಸಿದೆ.

ಉಡುಪಿ ಜಿಲ್ಲೆಯಲ್ಲಿ 2.58 ಲಕ್ಷ ಜಾನುವಾರುಗಳಿದ್ದು, ಕುಂದಾಪುರ, ಹೆಬ್ರಿ, ಬ್ರಹ್ಮಾವರ, ಕಾರ್ಕಳ ಭಾಗದಲ್ಲಿ ಹೈನುಗಾರಿಕೆ ಹೆಚ್ಚಿದೆ. ಬೇರೆ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದು ಆತಂಕಕ್ಕೆ ಕಾರಣ ವಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ಅಲ್ಪಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿತ್ತಾದರೂ ಸಕಾಲಿಕ ಚಿಕಿತ್ಸೆಯಿಂದ ಜಾನುವಾರುಗಳು ಶೀಘ್ರ ಗುಣಮುಖವಾಗಿದ್ದವು.

ರೋಗ ಲಕ್ಷಣಗಳು
ರೋಗಗ್ರಸ್ಥ ಜಾನುವಾರುಗಳಿಂದ ನೊಣ, ಸೊಳ್ಳೆ, ಉಣ್ಣಿಗಳ ಮೂಲಕ ಆರೋಗ್ಯಕರ ಜಾನುವಾರುಗಳಿಗೆ ಸೋಂಕು ಹರಡುತ್ತದೆ. ಜ್ವರ, ಶರೀರದಲ್ಲಿ ಅಲ್ಲಲ್ಲಿ ಸಿಡುಬಿನಂತಹ ಗುಳ್ಳೆಗಳು, ಗುಳ್ಳೆಗಳು ಒಡೆದ ಜಾಗದಲ್ಲಿ ಗುಳಿಗಳು, ಗಂತಿಗಳು ಕಂಡುಬರುವುದು, ಹಲವು ದಿನಗಳ ವರೆಗೆ ವಾಸಿಯಾಗದ ಗಾಯಗಳು, ದೇಹದ ಹಲವು ಭಾಗಗಳಿಗೆ ಸೋಂಕು ವ್ಯಾಪಿಸಿ ದೇಹ ಕುಂದುವುದು, ಹಾಲಿನ ಉತ್ಪಾದನೆ ಕಡಿಮೆಯಾಗುವುದು ಪ್ರಮುಖ ಲಕ್ಷಣಗಳು. ಸೂಕ್ತ ಚಿಕಿತ್ಸೆ ದೊರೆತಲ್ಲಿ ಎರಡು ವಾರದೊಳಗೆ ರೋಗ ಹತೋಟಿಗೆ ಬರುತ್ತದೆ ಎನ್ನುತ್ತಾರೆ ತಜ್ಞ ಪಶು ವೈದ್ಯರು.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

2 ಸಾವಿರ ಲಸಿಕೆ ಲಭ್ಯ
ದ.ಕ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪ್ರಕರಣ ದೃಢಪಟ್ಟಿಲ್ಲ. ಆದರೂ ಎಲ್ಲ ರೀತಿಯ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. 2 ಸಾವಿರ ಲಸಿಕೆಗಳನ್ನು ತರಿಸಿಕೊಂಡಿದ್ದೇವೆ.
– ಡಾ| ಅರುಣ್‌ ಕುಮಾರ್‌ ಶೆಟ್ಟಿ, ಉಪ ನಿರ್ದೇಶಕರು, ಪಶು ಸಂಗೋಪನೆ ಇಲಾಖೆ, ದ.ಕ. ಜಿಲ್ಲೆ

ಉಡುಪಿ – ದುರ್ಗಾ ದೌಡ್‌ : ಅ. 2ರಂದು ಕೃಷ್ಣನಗರಿಗೆ ಭೋಪಾಲ್ ಸಂಸದೆ ಪ್ರಜ್ಞಾ ಸಿಂಗ್‌ – Vishwanews24

10 ಸಾವಿರ ಲಸಿಕೆಗೆ ಇಂಡೆಂಟ್‌
ಈ ವರ್ಷ ಎಲ್ಲಿಯೂ ಚರ್ಮ ಗಂಟು ರೋಗ ಪ್ರಕರಣ ಜಾನುವಾರುಗಳಲ್ಲಿ ದೃಢಪಟ್ಟಿಲ್ಲ. ನಮ್ಮ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಹೆಚ್ಚಿನ ಮುಂಜಾಗ್ರತೆ ತೆಗೆದುಕೊಂಡಿದ್ದೇವೆ. ರೋಗ ಲಕ್ಷಣ ಕಾಣಿಸಿದಲ್ಲಿ ತತ್‌ಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಿ. 10 ಸಾವಿರ ಲಸಿಕೆಗೆ ಈಗಾಗಲೆ ಇಂಡೆಂಟ್‌ ಹಾಕಿದ್ದೇವೆ. ಸೋಂಕು ಕಂಡುಬಂದರೆ ಒಂದೆರಡು ಕಿ.ಮೀ. ವ್ಯಾಪ್ತಿಯಲ್ಲಿ ತೀವ್ರ ನಿಗಾ ವಹಿಸಲಾಗುತ್ತದೆ. ಬಾಧಿತ ಜಾನುವಾರುಗಳನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತದೆ.
– ಡಾ| ಶಂಕರ್‌ ಶೆಟ್ಟಿ, ಉಪ ನಿರ್ದೇಶಕರು, ಪಶು ಸಂಗೋಪನೆ ಇಲಾಖೆ, ಉಡುಪಿ ಜಿಲ್ಲೆ

– ಅವಿನ್‌ ಶೆಟ್ಟಿ

Vishwa News 24

Recent Posts

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

4 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

6 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

7 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

7 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

7 hours ago

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ -vishwanews24

ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…

8 hours ago