ಉಡುಪಿ : ಜಾಮಿಯಾ ಮಸೀದಿ ಬಳಿ ನಿರ್ಮಾಣ ಮಾಡಿದ್ದ ಅಕ್ರಮ ಕಟ್ಟಡವನ್ನು ಉಡುಪಿ ನಗರಸಭೆ ಮಾ.26ರ ಶನಿವಾರ ಬೆಳಗ್ಗೆ ತೆರವುಗೊಳಿಸಿದೆ.
ಎಸ್.ಡಿ.ಪಿ.ಐ ಉಡುಪಿ ಜಿಲ್ಲಾಧ್ಯಕ್ಷ್ಯರ ಮಾಲಿಕತ್ವದ ಹೋಟೆಲ್ ಕಟ್ಟಡ ಇದಾಗಿದ್ದು, ಕಳೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ಭಾರೀ ಪೊಲೀಸ್ ಭದ್ರತೆಯೊಂದಿಗೆ ಬೆಳ್ಳಂಬೆಳ್ಳಗೆ ಕಾರ್ಯಾಚರಣೆಗೆ ಇಳಿದ ನಗರಸಭೆಯೂ ಅಕ್ರಮ ಕಟ್ಟಡವನ್ನು ತೆರವುಗೊಳಿಸಿದೆ.
ತೆರವು ಕಾರ್ಯಾಚರಣೆ ವೇಳೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ನಗರಸಭಾ ಕಮಿಷನರ್, ಉಡುಪಿ ತಹಶೀಲ್ದಾರ್, ಉಡುಪಿ ನಗರ ಠಾಣಾ ಎಸ್ ಐ ಪ್ರಮೋದ್ ಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರು.
ಎರಡು ಬುಲ್ಡೋಜರ್, ಒಂದು ಕ್ರೇನ್, ಲಾರಿ ಬಳಸಿ ಕಾರ್ಯಾಚರಣೆ ನಡೆಸಲಾಗಿದ್ದು ,ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಆ್ಯಂಬುಲೆನ್ಸ್ ನಿಯೋಜನೆ ಮಾಡಲಾಗಿತ್ತು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…