ಉಡುಪಿ : ಜಾಮಿಯಾ ಮಸೀದಿ ಬಳಿ ನಿರ್ಮಾಣ ಮಾಡಿದ್ದ ಅಕ್ರಮ ಕಟ್ಟಡವನ್ನು ಉಡುಪಿ ನಗರಸಭೆ ಮಾ.26ರ ಶನಿವಾರ ಬೆಳಗ್ಗೆ ತೆರವುಗೊಳಿಸಿದೆ.
ಎಸ್.ಡಿ.ಪಿ.ಐ ಉಡುಪಿ ಜಿಲ್ಲಾಧ್ಯಕ್ಷ್ಯರ ಮಾಲಿಕತ್ವದ ಹೋಟೆಲ್ ಕಟ್ಟಡ ಇದಾಗಿದ್ದು, ಕಳೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ಹಿನ್ನಲೆಯಲ್ಲಿ ಭಾರೀ ಪೊಲೀಸ್ ಭದ್ರತೆಯೊಂದಿಗೆ ಬೆಳ್ಳಂಬೆಳ್ಳಗೆ ಕಾರ್ಯಾಚರಣೆಗೆ ಇಳಿದ ನಗರಸಭೆಯೂ ಅಕ್ರಮ ಕಟ್ಟಡವನ್ನು ತೆರವುಗೊಳಿಸಿದೆ.
ತೆರವು ಕಾರ್ಯಾಚರಣೆ ವೇಳೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ನಗರಸಭಾ ಕಮಿಷನರ್, ಉಡುಪಿ ತಹಶೀಲ್ದಾರ್, ಉಡುಪಿ ನಗರ ಠಾಣಾ ಎಸ್ ಐ ಪ್ರಮೋದ್ ಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರು.
ಎರಡು ಬುಲ್ಡೋಜರ್, ಒಂದು ಕ್ರೇನ್, ಲಾರಿ ಬಳಸಿ ಕಾರ್ಯಾಚರಣೆ ನಡೆಸಲಾಗಿದ್ದು ,ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಆ್ಯಂಬುಲೆನ್ಸ್ ನಿಯೋಜನೆ ಮಾಡಲಾಗಿತ್ತು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…