ಉಡುಪಿ : ಇನ್ಫೋಸಿಸ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 70 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸ್ನ್ಟ್ರೇಟರ್ ಹಾಗೂ 10 ವೆಂಟಿಲೇಟರ್ಗಳನ್ನು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಇನ್ಫೋಸಿಸ್ ವತಿಯಿಂದ ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಕೂಡಲೇ ಸ್ಪಂದಿಸಿ ಅಗತ್ಯವಿದ್ದ ಅರೋಗ್ಯ ಸಾಮಗ್ರಿಗಳನ್ನು ನೀಡಲಾಗಿದ್ದು, ಕೋವಿಡ್ 2 ನೇ ಅಲೆಯ ಈ ಸಮಯದಲ್ಲೂ ಸಹ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿ, ಅಕ್ಸಿಜನ್ ಕಾನ್ಸನ್ಟ್ರೇಟರ್ ಮತ್ತು ವೆಂಟಿಲೇಟರ್ಗಳನ್ನು ನೀಡಿದ್ದು, ಸಂಸ್ಥೆಯ ಮುಖ್ಯಸ್ಥರಿಗೆ ಜಿಲ್ಲಾಡಳಿತ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ಪ್ರಸ್ತುತ ನೀಡಿರುವ ಉಪಕರಣಗಳಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ 5 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್ಟ್ರೇಟರ್, ಕುಂದಾಪುರ ತಾಲೂಕು ಆಸ್ಪತ್ರೆಗೆ 2 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್ಟ್ರೇಟರ್, ಕಾರ್ಕಳ ತಾಲೂಕು ಆಸ್ಪತ್ರೆಗೆ 3 ವೆಂಟಿಲೇಟರ್ ಮತ್ತು ಅಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಇನ್ಫೋಸಿಸ್ ಮಂಗಳೂರು ವಿಭಾಗದ ಮ್ಯಾನೇಜರ್ಗಳಾದ ವಾಸುದೇವ ಕಾಮತ್ ಮತ್ತು ಸಂದೀಪ್ ಡಿಸಿಲ್ವಾ ಉಪಸ್ಥಿತರಿದ್ದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…