ಉಡುಪಿ: ಉಡುಪಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಡೆದಿರುವ ಬಹುಕೋಟಿ ಮರಳು ಹಗರಣದ ಕುರಿತು ಮೌನ ವಹಿಸಿರುವ ಕಾರಣವೇನು, ಯಾವುದೇ ಚಿಕ್ಕ ವಿಷಯಕ್ಕೂ ಕೂಡ ಪ್ರತಿಕ್ರಿಯೆ ನೀಡುವ ಜಿಲ್ಲಾಧಿಕಾರಿಗಳು ಕಣ್ಣು ಮುಚ್ಚಿ ಕೂತಿರುವುದು ಬಹಳಷ್ಟು ಬೇಸರದ ಸಂಗತಿ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಪ್ರಶ್ನಿಸಿದ್ದಾರೆ.
ಅವರು ಗುರುವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜನರಿಗೆ ತೀವ್ರ ಸಂಕಷ್ಟ ಒಡ್ಡುವ ಮಹಾಮಾರಿ ಕೊರೊನಾದಿಂದ ಕೈಗೊಂಡ ಲಾಕ್ ಡೌನ್ ಸಂದರ್ಭದಲ್ಲಿ ಉಡುಪಿ ನಗರದ ಜನರಿಗೆ ನೀರು ಪೂರೈಸುವ ನೆಪ ಒಡ್ಡಿ ಸ್ವಣಾ ನದಿಯು ಹೂಳೆತ್ತುವ ಕಾಮಗಾರಿಯಲ್ಲಿ ಬಹುಕೋಟಿ ಹಗರಣವು ನಡೆದಿದ್ದು ಯಾವುದೇ ನಿಯಮಗಳನ್ನು ಪಾಲಿಸುವುದಿಲ್ಲ. ಈ ಕಾಮಗಾರಿ ಸಂದರ್ಭದಲ್ಲಿ ಸಿಸಿ ಟಿವಿ ಹಾಗೂ ಜಿಪಿಎಸ್ ನ್ನು ಅಳವಡಿಸುವುದಿಲ್ಲ. ಅದಲ್ಲದೆ ಮರಳು ತೆಗೆಯಲಿಕ್ಕೆ ಹಿಟಾಚಿ ಯನ್ನು ಬಳಸಿದ್ದು ಕಾನೂನು ರೀತಿ ಅಪರಾಧವಾಗಿರುತ್ತದೆ. ಅಲ್ಲಲ್ಲಿ ಚೆಕ್ ಪೋಸ್ಟ್ ಗಳನ್ನು ಅಳವಡಿಸುವುದರಲ್ಲಿ ಜಿಲ್ಲಾಡಳಿತ ವಿಫಲ ಗೊಂಡಿರುತ್ತದೆ. ಸಾವಿರಾರು ಲೋಡ್ ಗಟ್ಟಲೆ ಮರಳನ್ನು ಕಳ್ಳ ಸಾಗಾಣಿಕೆ ಮಾಡಿ ಸರ್ಕಾರ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಗೊಂಡಿರುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕಣ್ಣು ಮುಚ್ಚಿ ಕೂತಿರುವುದು ಬಹಳಷ್ಟು ಬೇಸರದ ಸಂಗತಿ. ಈ ಬಗ್ಗೆ ಸ್ಥಳೀಯ ಸಾರ್ವಜನಿಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆ ರವರು, ನಗರಸಭೆ ಸದಸ್ಯರುಗಳು, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್, ಕಾಪು ಬ್ಲಾಕ್ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ನಿಂದ ನಿಯೋಗಗಳು ದೂರನ್ನು ನೀಡಿದ್ದು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ ಎಂದರು.ಶಾಸಕರಾದ ರಘುಪತಿ ಭಟ್ ಅವರು ಲಾಕ್ ಡೌನ್ ಸಂದರ್ಭದಲ್ಲಿ ಬೆಳಿಗ್ಗೆ ಜನರಿಗೆ ಊಟವನ್ನು ನೀಡಿ ಆಮೇಲೆ ಪ್ರತಿನಿತ್ಯ ಬಜೆ ಡ್ಯಾಮ್ಗೆ ಹಾಗೂ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿರುತ್ತಾರೆ. ಈ ಬಗ್ಗೆ ಮಾಧ್ಯಮ ವರದಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನಮಗೆ ದೊರಕಿದ್ದು ಜನವರಿ 15ಕ್ಕೆ ಈ ಕಾಮಗಾರಿಯ ಅವಧಿ ಮುಗಿದಿರುವ ಬಗ್ಗೆ ಅವರ ಗಮನಕ್ಕೆ ಬರಲಿಲ್ಲವೇ? ಅಥವಾ ಈ ಹಗರಣದ ಬಗ್ಗೆ ಅವರು ಕಣ್ಣಿದ್ದು ಕುರುಡಾಗಿ ದ್ದರು? ಎಂದು ಪ್ರಶ್ನಿಸಿದರು.
ಈ ಬಗ್ಗೆ ಈಗಾಗಲೇ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್ ಅವರು ರಾಜ್ಯ ಲೋಕಾಯುಕ್ತ ಜಸ್ಟೀಸ್ ವಿಶ್ವನಾಥ್ ಶೆಟ್ಟಿಯವರನ್ನು ಭೇಟಿ ನೀಡಿ ದೂರು ನೀಡಿದ್ದು ಹಗರಣದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಸೂಚನೆ ನೀಡಿರುತ್ತಾರೆ.
ಈ ನಡುವೆ ಹಗರಣದ ಬಗ್ಗೆ ನಾವು ಪತ್ರಿಕಾಗೋಷ್ಠಿ ನಡೆಸಿ ಪ್ರಶ್ನಿಸಿದಾಗ ಅವರು ಅದು ಮಣ್ಣು ಮಿಶ್ರಿತ ಮರುಳೆಂದು ಸ್ಪಷ್ಟನೆಯನ್ನು ನೀಡಿರುವುದನ್ನು ನಾವು ಪತ್ರಿಕೆಯಲ್ಲಿ ಓದಿರುತ್ತೇವೆ. ಆದರೆ ಅವರಿಗೆ ಈ ಸಂದರ್ಭದಲ್ಲಿ ಈ ಕಾಮಗಾರಿ ಅವಧಿ ಮುಗಿದಿರುತ್ತದೆ ಅಥವಾ ಸಿಸಿ ಟಿವಿ, ಜಿಪಿಎಸ್ ಅಳವಡಿಸದಿರುವುದು ಗಮನಕ್ಕೆ ಬಂದಿಲ್ಲವೇ? ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಯಾಗುವವರೆಗೂ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಿರಂತರ ಹೋರಾಟ ನಡೆಯಲಿರುವುದು ಎಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ತೀರ್ಮಾನಿಸಿರುತ್ತೇವೆ ವಿಶ್ವಾಸ್ ವಿ. ಅಮೀನ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ನಗರಸಭಾ ಸದಸ್ಯ ರಮೇಶ್ ಕಾಂಚನ್, ವಿಜಯ ಪೂಜಾರಿ, ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಜಿಲ್ಲಾಧ್ಯಕ್ಷ ಯತೀಶ್ ಕರ್ಕೇರಾ, ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಸಂಜಯ್ ಆಚಾರ್ಯ ಉಪಸ್ಥಿತರಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…