ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮತ್ತು ಕಚೇರಿಗೆ ಆಗಮಿಸುವ ಮಹಿಳೆಯರಿಗೆ ಸುಸಜ್ಜಿತ ವಿಶ್ರಾಂತಿ ಕೊಠಡಿ ನಿರ್ಮಿಸಲಾಗಿದೆ.
ಉಡುಪಿಯ ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ಮಹಿಳಾ ನೌಕರರು ಹಾಗೂ ಕಚೇರಿಗೆ ಆಗಮಿಸುವ ಮಹಿಳೆಯರ ಸಮಸ್ಯೆಗಳನ್ನು ಅರಿತು, ವಿಶೇಷ ಆಸಕ್ತಿ ವಹಿಸಿ ಆರಂಭಿಸಿರುವ ಈ ಮಹಿಳಾ ವಿಶ್ರಾಂತಿ ಕೊಠಡಿ ಮಹಿಳೆಯರ ಎಲ್ಲಾ ಅಗತ್ಯತೆಗಳನ್ನು ಪೂರೈಸಲಿದೆ. ಈ ಕೊಠಡಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಊಟ ಮಾಡಲು ಡೈನಿಂಗ್ ಟೇಬಲ್ ವ್ಯವಸ್ಥೆ, ವಿಶ್ರಾಂತಿ ಪಡೆಯಲು ಮಂಚ ಮತ್ತು ಬೆಡ್ ವ್ಯವಸ್ಥೆ ಇದೆ. ಅಲ್ಲದೇ ತಾಯಿಯರೊಂದಿಗೆ ಆಗಮಿಸುವ ಮಕ್ಕಳನ್ನು ಮಲಗಿಸಲು ಮರದ ತೊಟ್ಟಿಲು, ಉಡುಪು ಬದಲಾವಣಾ ಕೊಠಡಿ ಸೌಲಭ್ಯ ಸಹ ಇದೆ. ಶೌಚಾಲಯದಲ್ಲಿ ನ್ಯಾಪ್ಕಿನ್ ಬರ್ನಿಂಗ್ ವ್ಯವಸ್ಥೆ ಕೂಡಾ ಇದ್ದು, ಮುಂದಿನ ದಿನಗಳಲ್ಲಿ ನ್ಯಾಪ್ಕಿನ್ ವೆಂಡಿಂಗ್ ಮೆಷಿನ್ ಸಹ ಬರಲಿದ್ದು, ಈ ಮೆಷಿನ್ನಲ್ಲಿ ನಿಗಧಿತ ನಾಣ್ಯ ಪಾವತಿಸುವ ಮೂಲಕ ನ್ಯಾಪ್ಕಿನ್ ಪಡೆಯುವ ಸೌಲಭ್ಯ ದೊರೆಯಲಿದೆ.
ಹೆಚ್ಚಿನ ಸಂಖ್ಯೆಯ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯಿದ್ದು, ತಮ್ಮ ಮಾಸಿಕ ದಿನಗಳಲ್ಲಿ ಕೆಲಸ ಮಾಡಲು ಕಷ್ಟಪಡುವ ಮಹಿಳೆಯರು ಈ ವಿಶ್ರಾಂತಿ ಕೊಠಡಿಯಲ್ಲಿ ತುಸು ವಿಶ್ರಾಂತಿ ಪಡೆದು ಮತ್ತೆ ಕೆಲಸ ನಿರ್ವಹಿಸಬಹುದು. ಪ್ರಸೂತಿ ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ಮಹಿಳಾ ನೌಕರರು, ಅಗತ್ಯವಿದ್ದಲ್ಲಿ ಮನೆಯಿಂದ ಮಗುವನ್ನು ಕರೆಸಿ, ಹಾಲುಣಿಸಿ ಮತ್ತೆ ಮನೆಗೆ ಕಳುಹಿಸಬಹುದು. ಕರ್ತವ್ಯ ನಿರ್ವಹಣೆ ಸಮಯದಲ್ಲಿ ಮಹಿಳಾ ನೌಕರರು ಹೇಳಿಕೊಳ್ಳಲಾಗದ ಸಮಸ್ಯೆಗಳಿಗೆ ಈ ವಿಶ್ರಾಂತಿ ಕೊಠಡಿ ಪರಿಹಾರವಾಗಲಿದೆ.
ಮಹಿಳೆಯಾಗಿ ಮಹಿಳೆಯರ ಕಷ್ಟಗಳನ್ನು ಅರಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ವಿಶೇಷ ಮತುವರ್ಜಿ ವಹಿಸಿ ಈ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಾಣ ಮಾಡಲು ಕ್ರಮ ಕೈಗೊಂಡಿದ್ದು, ಮಹಿಳಾ ವಿಶ್ರಾಂತಿ ಕೊಠಡಿಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಮಂಗಳವಾರ ಉದ್ಘಾಟಿಸಿದರು.
ಮಹಿಳಾ ನೌಕರರು ಮತ್ತು ಕಚೇರಿಗೆ ಬರುವ ಮಹಿಳೆಯರ ಸಮಸ್ಯೆಗಳನ್ನು ಅರಿತು, ವಿಶೇಷ ಆಸಕ್ತಿ ವಹಿಸಿ ಆರಂಭಿಸಿರುವ ಈ ಮಹಿಳಾ ವಿಶ್ರಾಂತಿ ಕೊಠಡಿ ಮಹಿಳೆಯರ ಅಗತ್ಯಗಳನ್ನು ಪೂರೈಸಲಿದೆ.
– ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ಗಮನ ಜಿಲ್ಲಾಧಿಕಾರಿ, ಉಡುಪಿ
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…