Featured

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳೆಯರಿಗೆ ಸುಸಜ್ಜಿತ ವಿಶ್ರಾಂತಿ ಕೊಠಡಿ ನಿರ್ಮಾಣ -Vishwanews24

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮತ್ತು ಕಚೇರಿಗೆ ಆಗಮಿಸುವ ಮಹಿಳೆಯರಿಗೆ ಸುಸಜ್ಜಿತ ವಿಶ್ರಾಂತಿ ಕೊಠಡಿ ನಿರ್ಮಿಸಲಾಗಿದೆ.

ಉಡುಪಿಯ ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ಮಹಿಳಾ ನೌಕರರು ಹಾಗೂ ಕಚೇರಿಗೆ ಆಗಮಿಸುವ ಮಹಿಳೆಯರ ಸಮಸ್ಯೆಗಳನ್ನು ಅರಿತು, ವಿಶೇಷ ಆಸಕ್ತಿ ವಹಿಸಿ ಆರಂಭಿಸಿರುವ ಈ ಮಹಿಳಾ ವಿಶ್ರಾಂತಿ ಕೊಠಡಿ ಮಹಿಳೆಯರ ಎಲ್ಲಾ ಅಗತ್ಯತೆಗಳನ್ನು ಪೂರೈಸಲಿದೆ. ಈ ಕೊಠಡಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಊಟ ಮಾಡಲು ಡೈನಿಂಗ್ ಟೇಬಲ್ ವ್ಯವಸ್ಥೆ, ವಿಶ್ರಾಂತಿ ಪಡೆಯಲು ಮಂಚ ಮತ್ತು ಬೆಡ್ ವ್ಯವಸ್ಥೆ ಇದೆ. ಅಲ್ಲದೇ ತಾಯಿಯರೊಂದಿಗೆ ಆಗಮಿಸುವ ಮಕ್ಕಳನ್ನು ಮಲಗಿಸಲು ಮರದ ತೊಟ್ಟಿಲು, ಉಡುಪು ಬದಲಾವಣಾ ಕೊಠಡಿ ಸೌಲಭ್ಯ ಸಹ ಇದೆ. ಶೌಚಾಲಯದಲ್ಲಿ ನ್ಯಾಪ್ಕಿನ್ ಬರ್ನಿಂಗ್ ವ್ಯವಸ್ಥೆ ಕೂಡಾ ಇದ್ದು, ಮುಂದಿನ ದಿನಗಳಲ್ಲಿ ನ್ಯಾಪ್ಕಿನ್ ವೆಂಡಿಂಗ್ ಮೆಷಿನ್ ಸಹ ಬರಲಿದ್ದು, ಈ ಮೆಷಿನ್‍ನಲ್ಲಿ ನಿಗಧಿತ ನಾಣ್ಯ ಪಾವತಿಸುವ ಮೂಲಕ ನ್ಯಾಪ್ಕಿನ್ ಪಡೆಯುವ ಸೌಲಭ್ಯ ದೊರೆಯಲಿದೆ.

ಹೆಚ್ಚಿನ ಸಂಖ್ಯೆಯ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯಿದ್ದು, ತಮ್ಮ ಮಾಸಿಕ ದಿನಗಳಲ್ಲಿ ಕೆಲಸ ಮಾಡಲು ಕಷ್ಟಪಡುವ ಮಹಿಳೆಯರು ಈ ವಿಶ್ರಾಂತಿ ಕೊಠಡಿಯಲ್ಲಿ ತುಸು ವಿಶ್ರಾಂತಿ ಪಡೆದು ಮತ್ತೆ ಕೆಲಸ ನಿರ್ವಹಿಸಬಹುದು. ಪ್ರಸೂತಿ ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗುವ ಮಹಿಳಾ ನೌಕರರು, ಅಗತ್ಯವಿದ್ದಲ್ಲಿ ಮನೆಯಿಂದ ಮಗುವನ್ನು ಕರೆಸಿ, ಹಾಲುಣಿಸಿ ಮತ್ತೆ ಮನೆಗೆ ಕಳುಹಿಸಬಹುದು. ಕರ್ತವ್ಯ ನಿರ್ವಹಣೆ ಸಮಯದಲ್ಲಿ ಮಹಿಳಾ ನೌಕರರು ಹೇಳಿಕೊಳ್ಳಲಾಗದ ಸಮಸ್ಯೆಗಳಿಗೆ ಈ ವಿಶ್ರಾಂತಿ ಕೊಠಡಿ ಪರಿಹಾರವಾಗಲಿದೆ.

ಮಹಿಳೆಯಾಗಿ ಮಹಿಳೆಯರ ಕಷ್ಟಗಳನ್ನು ಅರಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ವಿಶೇಷ ಮತುವರ್ಜಿ ವಹಿಸಿ ಈ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಾಣ ಮಾಡಲು ಕ್ರಮ ಕೈಗೊಂಡಿದ್ದು,  ಮಹಿಳಾ ವಿಶ್ರಾಂತಿ ಕೊಠಡಿಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಮಂಗಳವಾರ ಉದ್ಘಾಟಿಸಿದರು.

 ಮಹಿಳಾ ನೌಕರರು ಮತ್ತು ಕಚೇರಿಗೆ ಬರುವ ಮಹಿಳೆಯರ ಸಮಸ್ಯೆಗಳನ್ನು ಅರಿತು, ವಿಶೇಷ ಆಸಕ್ತಿ ವಹಿಸಿ ಆರಂಭಿಸಿರುವ ಈ ಮಹಿಳಾ ವಿಶ್ರಾಂತಿ ಕೊಠಡಿ ಮಹಿಳೆಯರ ಅಗತ್ಯಗಳನ್ನು ಪೂರೈಸಲಿದೆ.
– ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ಗಮನ ಜಿಲ್ಲಾಧಿಕಾರಿ, ಉಡುಪಿ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago