ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ದಿನಾಂಕ 03-02-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ದೇವಸ್ಥಾನದ ಸುತ್ತ ಮುತ್ತಲಿನ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸ್ವಚ್ಛ ಮತ್ತು ಸುಂದರೀಕರಣಗೊಳಿಸುವ ಬಗ್ಗೆ ಮತ್ತು ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಗೌರವಾಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್, ಉಪಾಧ್ಯಕ್ಷರಾದ ಕೆ. ದಿವಾಕರ್ ಶೆಟ್ಟಿ, ಮಾಧವ ಆರ್ ಪಾಲನ್, ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕೆ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…