ಉಡುಪಿ: ಜಿಲ್ಲೆಯ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಾಗುವ ಅನಾಥ ರೋಗಿಗಳ ಆರೈಕೆಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಹಯೋಗದಲ್ಲಿ ಅನಾಥಾಲಯ ಆರಂಭಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಆಸ್ಪತ್ರೆಗೆ ಸಮಾಜಸೇವಕರು ಮತ್ತು ಸಾರ್ವಜನಿಕರು ಅನಾಥ ರೋಗಿಗಳನ್ನು ದಾಖಲಿಸುತ್ತಿದ್ದು, ಇವರಿಗೆ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆ ಇರುವ ಬಗ್ಗೆ ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ತಿಳಿಸಿದರು. ಈ ಕುರಿತಂತೆ ಅನಾಥ ರೋಗಿಗಳ ಆರೈಕೆಗಾಗಿ ಜಿಲ್ಲೆಯಲ್ಲಿ ಅನಾಥಾಲಯ ಆರಂಭಿಸುವಂತೆ ಮತ್ತು ಜಿಲ್ಲಾಸ್ಪತ್ರೆಯಿಂದ ಸೂಚಿಸುವ ಅನಾಥರೋಗಿಗಳನ್ನು ಕಡ್ಡಾಯವಾಗಿ ದಾಖಲು ಮಾಡಿಕೊಳ್ಳುವಂತೆ ತಿಳಿಸಿದ ಮಹೇಶ್ವರ ರಾವ್, ಈ ಅನಾಥಾಲಯಕ್ಕೆ ಜಿಲ್ಲಾ ಖನಿಜ ನಿಧಿಯಿಂದ ಕೂಡ ಅಗತ್ಯ ಆರ್ಥಿಕ ನೆರವು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಉಡುಪಿ ಜಿಲ್ಲಾಸ್ಪತ್ರೆ ಇದುವರೆಗೂ ತಾಲೂಕು ಆಸ್ಪತ್ರೆ ಮಾದರಿಯಲ್ಲಿಯೇ ಇದ್ದು, ಇದನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ ಕೋರಿದರು. ಈ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ ಮಹೇಶ್ವರ ರಾವ್, ಪ್ರಸ್ತುತ ಆಸ್ಪತ್ರೆಯಲ್ಲಿ ದಾಖಲಾಗುತ್ತಿರುವ ಒಳರೋಗಿಗಳ ಸಂಖ್ಯೆ, ಚಿಕಿತ್ಸೆಗೆ ಆಗಮಿಸುತ್ತಿರುವ ಹೊರರೋಗಿಗಳ ಸಂಖ್ಯೆ ಕುರಿತಂತೆ ವಿವರಗಳನ್ನು ನೀಡುವಂತೆ ಜಿಲ್ಲಾ ಸರ್ಜನ್ಗೆ ಸೂಚಿಸಿದ ಅವರು, ಈ ಬಗ್ಗೆ ಸಂಬಂದಪಟ್ಟವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…