ಉಡುಪಿ, : ಎಂ.ಟಿ.ಆರ್ ಸಂಸ್ಥೆಯು ಸಿಎಸ್ಆರ್ ಚಟುವಟಿಕೆಯಡಿ ೫೦ ಲಕ್ಷ ರೂಗಳಲ್ಲಿ ಒಂದು ಹವಾನಿಯಂತ್ರಿತ ವೆಂಟಿಲೇಟರ್ ಸೌಲಭ್ಯವನ್ನು ಒಳಗೊಂಡ ಅತ್ಯಾಧುನಿಕ ಆ್ಯಂಬುಲೆನ್ಸ್ ಹಾಗೂ ೧೦ ಐಸಿಯು ಬೆಡ್ಗಳನ್ನು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರ ಸಮ್ಮುಖದಲ್ಲಿ ಜಿಲ್ಲಾಸ್ಪತ್ರೆಗೆ, ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಇಂದು ಹಸ್ತಾಂತರಿಸಲಾಯಿತು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗೆ ಅನುಕೂಲವಾಗುವಂತೆ ಜಿಲ್ಲೆಯ ವಿವಿಧ ಖಾಸಗಿ ಸಂಸ್ಥೆಗಳು, ದಾನಿಗಳು ಸಹಕಾರ ನೀಡುತ್ತಿದ್ದು ಆ ನಿಟ್ಟಿನಲ್ಲಿ ಎಂಟಿಆರ್ ಫುಡ್ ಸಂಸ್ಥೆಯು ಪ್ರಸ್ತುತ ಅವಶ್ಯವಿರುವ ಮತ್ತು ಕೋವಿಡ್ ೩ನೇ ಅಲೆಯ ಮುಂಜಾಗ್ರತೆಯ ದೃಷ್ಟಿಯಿಂದ ೫೦ ಲಕ್ಷ ರೂಗಳಲ್ಲಿ ನೆರವು ನೀಡಿರುವುದು ಜಿಲ್ಲಾಭಿವೃದ್ಧಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ ಎಂದರು.
ಎಂಟಿಆರ್ ಸಂಸ್ಥೆಯ ಜನರಲ್ ಬ್ಯುಸಿನೆಸ್ ಮ್ಯಾನೇಜರ್ ಮೂರ್ತಿ ಆರ್ ಮಾತನಾಡಿ, ಎಂ.ಟಿ.ಆರ್ ಸಂಸ್ಥೆಯು ಸಾರ್ವಜನಿಕರ ಸೇವೆಯನ್ನು ಮಾಡುವುದು ಸಂಸ್ಥೆಯ ಮುಖ್ಯ ಗುರಿ ಹೊಂದಿದ್ದು, ಒಂದು ವರ್ಷದ ಗ್ಯಾರೆಂಟಿ ಮತ್ತು ವಾರೆಂಟಿ, ಉಚಿತ ಸರ್ವಿಸ್ ಇರುವ ಸುಸಜ್ಜಿತ ಆ್ಯಂಬುಲೆನ್ಸ್ ಹಾಗೂ ೧೦ ವೆಂಟಿಲೇಟರ್ ಬೆಡ್ಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ, ಸಾರ್ವಜನಿಕರು ಸೂಕ್ತ ರೀತಿಯಲ್ಲಿ ಇದರ ಉಪಯೋಗ ಪಡೆದುಕೊಂಡಲ್ಲಿ ಸಂಸ್ಥೆಯ ಕೊಡುಗೆಗೆ ಮಹತ್ವ ಸಿಕ್ಕಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಡಿ.ಹೆಚ್.ಓ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಶಾಂತ್ ಭಟ್, ಎಂ.ಟಿ.ಆರ್ ಸಂಸ್ಥೆಯ ಮುಖ್ಯಾಧಿಕಾರಿ ಪ್ರಕಾಶ್ ದೇಬಶೆಟ್ಟಿ, ಸಂಸ್ಥೆಯ ಏರಿಯಾ ಸೇಲ್ಸ್ ಮ್ಯಾನೇಜರ್ ಆಶಿಶ್ ಭಂಡಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…