ಉಡುಪಿ: ಜಿಲ್ಲಾ ಆಸ್ಪತ್ರೆಯನ್ನು ಶೀಘ್ರದಲ್ಲಿಯೇ ಮೇಲ್ದರ್ಜೆಗೇರಿಸಿ 300 ಬೆಡ್ಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನಗರದ ಕಂಟ್ರಿ ಹೋಟೆಲ್ನ ಸಭಾಂಗಣದಲ್ಲಿ ಜಿಲ್ಲಾಡಳಿತಕ್ಕೆ ವೆಂಟಿಲೇಟರ್ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ವೆಂಟಿಲೇಟರ್ಗಳನ್ನು ಹಸ್ತಾಂತರಿಸಿ ಮಾತನಾಡಿದರು. ಉಡುಪಿಯ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಗಳು ಅನುಮೋದನೆಯನ್ನು ನೀಡಿದ್ದಾರೆ. ಈ ಕಾರ್ಯಕ್ಕೆ ಅನುದಾನವು ಹಣಕಾಸು ಇಲಾಖೆಯಿಂದ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದ್ದು, ಮೇಲ್ದರ್ಜೆಗೇರಿಸಿ ಶೀಘ್ರದಲ್ಲಿ ಕಾರ್ಯ ಪ್ರಾರಂಭವಾಗಲಿದೆ ಎಂದರು.
ಕೊರೊನಾ ಸೋಂಕು ಹೊಂದಿ ಉಸಿರಾಟದ ಸಮಸ್ಯೆ ಇರುವ ರೋಗಿಗಳಿಗೆ ಚಿಕಿತ್ಸೆ ನೀಡಿ ಅನುಕೂಲ ಮಾಡಿ ಕೊಡುವ ಉದ್ದೇಶದಿಂದ ಸರ್ಕಾರವು 20 ಹಾಗೂ ದಾನಿಗಳಿಂದ 10 ವೆಂಟಿಲೇಟರ್ಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಇವುಗಳ ಬಳಕೆ ಮಾಡಿ ಚಿಕಿತ್ಸೆ ನೀಡುವುದರಿಂದ ಮರಣವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ಶಾಸಕ ರಘುಪತಿ ಭಟ್ ಅವರು ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ 100 ಕ್ಕೂ ಹೆಚ್ಚು ದಿನಗಳ ಕಾಲ ಆಹಾರ ಪದಾರ್ಥಗಳನ್ನು ಹಂಚಿಕೆ ಮಾಡಿದ್ದಾರೆ, ಅಲ್ಲದೇ ದಾನಿಗಳನ್ನು ಸಂಪರ್ಕಿಸಿ 10ಕ್ಕೂ ಹೆಚ್ಚು ವೆಂಟಿಲೇಟರ್ಗಳನ್ನು ದಾನವಾಗಿ ಪಡೆಯುವುದರೊಂದಿಗೆ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆಂದು ಅವರಿಗೆ ಅಭಿನಂದನೆ ತಿಳಿಸಿದರು.
ಸರ್ಕಾರವು ಎಲ್ಲಾ ರೀತಿಯಲ್ಲಿಯೂ ಕೂಡ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಪ್ರಯತ್ನ ನಡೆಸುತ್ತಲೇ ಇದೆ. ಇಂದು ನೀಡಿದ ವೆಂಟಿಲೇಟರ್ಗಳನ್ನು ಸರ್ಕಾರ ಹಾಗೂ ಖಾಸಗಿ ಆಸ್ಪತ್ರೆಗಳ ಸಹಯೋಗದಲ್ಲಿ ಬಳಕೆ ಮಾಡಿಕೊಳ್ಳಲಾಗುವುದು ಎಂದರು.
ಕೊರೊನಾ ಸವಾಲಿನ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಕ್ಕೆ ವೆಂಟಿಲೇಟರ್ಗಳನ್ನು ದಾನವಾಗಿ ನೀಡಿದ ಡಾ.ಜಿ. ಶಂಕರ್, ಆಭರಣ ಜ್ಯುವೆಲ್ರ್ಸ್, ರೋಬೋ ಸಾಫ್ಟವೇರ್ ಟೆಕ್ನಾಲಜಿ ಹಾಗೂ ಹೆಗ್ಗುಂಜೆ ರಾಜೀವ್ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಎಚ್.ಎನ್ ಶೆಟ್ಟಿಯವರಿಗೆ ಅಭಿನಂದನೆಗೈದರು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ ಜಗದೀಶ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮತ್ತಿತರು ಉಪಸ್ಥಿತರಿದ್ದರು
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…