Featured

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್ ಸ್ಪಷ್ಟನೆ – vishwanews24

ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್ ಸ್ಪಷ್ಟನೆ

ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತವಾಗಿದ್ದು, ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ. ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಜು.7ರಂದು ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಿಂದ ಯಾವುದೇ ದಾಖಲಾತಿ ಅಥವಾ ರಶೀದಿ ಇಲ್ಲದೆ ರಕ್ತ ವಿತರಿಸಲಾಗುತ್ತಿದೆ ಹಾಗೂ ಒಂದೇ ಬಾರಿ 15 ಯೂನಿಟ್ ರಕ್ತವನ್ನು ಖಾಸಗಿ ಆಸ್ಪತ್ರೆಗೆ ನೀಡಲಾಗಿದೆ ಎಂಬ ಆರೋಪಗಳು ಪ್ರಸಾರವಾಗಿದ್ದವು. ಆದರೆ ಈ ಎಲ್ಲ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಯಾವುದೇ ಆಧಾರವಿಲ್ಲ ಎಂದು ಜಿಲ್ಲಾ ಆಸ್ಪತ್ರೆ ತಿಳಿಸಿದೆ.

ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತ ಹಾಗೂ ರಕ್ತ ಘಟಕಗಳ ವಿತರಣೆಯನ್ನು ಕರ್ನಾಟಕ ಸರ್ಕಾರದ ಜಾರಿಯಲ್ಲಿರುವ ಮಾರ್ಗಸೂಚಿಗಳು, Drugs and Cosmetics Act, 1940, ಸಂಬಂಧಿತ ನಿಯಮಗಳು ಹಾಗೂ ರಕ್ತ ನಿಧಿ ಕೇಂದ್ರದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOPs) ಅನ್ವಯ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ ಎಂದು ಆಸ್ಪತ್ರೆ ಆಡಳಿತ ಸ್ಪಷ್ಟಪಡಿಸಿದೆ.

ಪ್ರತಿ ಯೂನಿಟ್ ರಕ್ತ ಅಥವಾ ರಕ್ತ ಘಟಕವನ್ನು ಅಗತ್ಯ ದಾಖಲೆಗಳನ್ನು ಪರಿಶೀಲಿಸಿ, ನಿಗದಿತ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕವೇ ವಿತರಿಸಲಾಗುತ್ತದೆ. ದಾಖಲಾತಿಗಳಿಲ್ಲದೆ ಯಾವುದೇ ರಕ್ತ ಅಥವಾ ರಕ್ತ ಘಟಕವನ್ನು ವಿತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದೆ.

ಅದೇ ರೀತಿ, ಬ್ಲಡ್ ಸ್ಟೋರೇಜ್ ಯುನಿಟ್ ನಿರ್ವಹಿಸುತ್ತಿರುವ ಆದರ್ಶ ಆಸ್ಪತ್ರೆಗೂ ಸರ್ಕಾರದ ಮಾರ್ಗಸೂಚಿಗಳ ಪ್ರಕಾರವೇ ರಕ್ತವನ್ನು ವಿತರಿಸಲಾಗಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಆಸ್ಪತ್ರೆ ಆಡಳಿತ ಹೇಳಿದೆ.

ಸುಳ್ಳು ಮಾಹಿತಿ ಹರಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಧಾರರಹಿತ ಮಾಹಿತಿಯನ್ನು ನಂಬದೆ, ಜಿಲ್ಲಾ ಆಸ್ಪತ್ರೆಯ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸದಂತೆ ಮನವಿ ಮಾಡಿರುವ ಆಸ್ಪತ್ರೆ ಆಡಳಿತ, ನೈಜ ಮಾಹಿತಿಯನ್ನೇ ಪ್ರಕಟಿಸುವಂತೆ ಮಾಧ್ಯಮಗಳಿಗೂ ಅವರು ವಿನಂತಿಸಿದ್ದಾರೆ.

Vishwa News 24

Recent Posts

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

38 minutes ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

44 minutes ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

57 minutes ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

1 hour ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago

ಚೀನಾದ ಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ – vishwanews24

ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್‌: ಶೂ ರಾಜಧಾನಿ ಎಂದೇ…

2 hours ago