ಉಡುಪಿ: ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದ ಪ್ರಣವ್ ಮುಖರ್ಜಿಯವರು ಜನಮಾನಸದಲ್ಲಿ ವಿಶಿಷ್ಠ ಸ್ಥಾನವನ್ನು ಪಡೆದವರು. ಉತ್ತಮ ವಾಗ್ಮಿಯಾಗಿ, ಸಂಸದೀಯ ಪಟುವಾಗಿ ರಾಷ್ಟ್ರಪತಿಯಾಗುವ ಮುನ್ನ ಕಾಂಗ್ರೆಸ್ ಸರಕಾರಗಳಲ್ಲಿ ರಕ್ಷಣೆ, ವಿದೇಶಾಂಗ, ವಾಣಿಜ್ಯ, ಹಣಕಾಸು, ಕೈಗಾರಿಕಾ ಇಲಾಖೆಗಳ ಸಚಿವರಾಗಿ ಸಮರ್ಥರಾಗಿ ಕಾರ್ಯ ನಿರ್ವಹಿಸಿ ತಾವು ಕೆಲಸ ಮಾಡಿದ ಇಲಾಖೆಗಳಲೆಲ್ಲಾ ಹೊಸತನ, ಆಡಳಿತ ಸುಧಾರಣೆಗಳನ್ನು ಜಾರಿಗೆ ತಂದವರಾಗಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣವ್ ಮುಖರ್ಜಿಯವರ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡುತ್ತಿದ್ದರು.
ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಮಾತನಾಡುತ್ತಾ ಪ್ರಣವ್ ಮುಖರ್ಜಿಯವರು ವಿತ್ತ ಸಚಿವರಾಗಿ ಸುಧಾರಣೆಗಳ ಮೂಲಕ ಭಾರತದ ಆರ್ಥಿಕತೆಯ ದಿಕ್ಕನ್ನು ಬದಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜಿ.ಎಸ್.ಟಿ. ಪರಿಕಲ್ಪನೆಯನ್ನು ಮೊದಲಿಗೆ ಜಾರಿಗೆ ತಂದ ಹೆಗ್ಗಳಿಕೆ ಅವರದಾಗಿತ್ತು. ಮುಖರ್ಜಿಯವರು ಕಟ್ಟಾ ಕಾಂಗ್ರೆಸ್ಸಿಗರಾದರೂ ಪ್ರತಿಪಕ್ಷ ನಾಯಕರೊಂದಿಗೂ ಉತ್ತಮ ಭಾಂದವ್ಯ ಹೊಂದಿ ಅಜಾತಶತ್ರುವಾಗಿದ್ದರು. ದೇಶದ ಆರ್ಥಿಕ ಸುಧಾರಣೆಗೆ ಪ್ರಣವ್ ಮುಖರ್ಜಿಯವರ ಕೊಡುಗೆ ಅಪಾರ ಎಂದರು.
ಈ ಸಂದರ್ಭದಲ್ಲಿ ದಿನೇಶ್ ಪುತ್ರನ್, ಬಿ. ನರಸಿಂಹ ಮೂರ್ತಿ, ವೆರೋನಿಕಾ ಕರ್ನೇಲಿಯೋ, ಹರೀಶ್ ಕಿಣಿ, ಮುರಳಿ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕುಶಲ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಕೀರ್ತಿ ಶೆಟ್ಟಿ, ಕೇಶವ್ ಕೋಟ್ಯಾನ್, ಬಾಲಕೃಷ್ಣ ಪೂಜಾರಿ, ವಿಶ್ವಾಸ್ ವಿ. ಅಮೀನ್, ಇಸ್ಮಾಯಿಲ್ ಆತ್ರಾಡಿ, ಶಶಿಧರ ಶೆಟ್ಟಿ ಎಲ್ಲೂರು, ಉದ್ಯಾವರ ನಾಗೇಶ್ ಕುಮಾರ್, ಯತೀಶ್ ಕರ್ಕೇರಾ, ಕೃಷ್ಣಮೂರ್ತಿ ಆಚಾರ್ಯ, ಮೀನಾಕ್ಷಿ ಮಾಧವ ಬನ್ನಂಜೆ, ಚಂದ್ರಿಕಾ ಶೆಟ್ಟಿ, ಲೂವಿಸ್ ಲೋಬೋ, ಕಿಶೋರ್ ಎರ್ಮಾಳ್, ಉಪೇಂದ್ರ ಮೆಂಡನ್, ಅಮೃತಾ ಕೃಷ್ಣಮೂರ್ತಿ, ವಿಜಯ ಪೂಜಾರಿ, ರಮೇಶ್ ಕಾಂಚನ್, ಆರ್.ಕೆ. ರಮೇಶ್ ಪೂಜಾರಿ, ನಾರಾಯಣ ಕುಂದರ್, ಪ್ರಶಾಂತ್ ಪೂಜಾರಿ, ಹಮದ್ ಮೊದಲಾದವರು ಉಪಸ್ಥಿತರಿದ್ದರು.
ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿ, ಉಡುಪಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಧನ್ಯವಾದವಿತ್ತರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…