Featured

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್‌ಕ್ಲಬ್ ಸಹಯೋಗದೊಂದಿಗೆ ಪತ್ರಕರ್ತ ಸಂದೀಪ್ ಪೂಜಾರಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮ  – vishwanews24

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್‌ಕ್ಲಬ್  ಸಹಯೋಗದೊಂದಿಗೆ ಪತ್ರಕರ್ತ ಸಂದೀಪ್ ಪೂಜಾರಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್‌ಕ್ಲಬ್ ಸಮಿತಿಯ ಸಹಯೋಗದೊಂದಿಗೆ, ಇತ್ತೀಚೆಗೆ ನಿಧನರಾದ ಪತ್ರಕರ್ತ ಮತ್ತು ಸಂಘದ ಸದಸ್ಯರಾದ ಸಂದೀಪ್ ಪೂಜಾರಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಇಂದು ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, “ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಶಾಶ್ವತವಾಗಿ ಉಳಿಯುವುದು ವ್ಯಕ್ತಿಯ ಜೀವನಶೈಲಿಯಿಂದ ಗಳಿಸಿದ ಪ್ರೀತಿ ಮತ್ತು ಸದ್ಭಾವನೆ. ನಾವು ಪ್ರತಿಭಾವಂತ ಪತ್ರಕರ್ತರನ್ನು ಕಳೆದುಕೊಂಡಿದ್ದೇವೆ. ಸಂದೀಪ್ ಅವರು ಎಲ್ಲರನ್ನು ಆಕರ್ಷಿಸುವ ಮತ್ತು ಪ್ರೀತಿಸುವ ವ್ಯಕ್ತಿತ್ವವನ್ನು ಹೊಂದಿದ್ದರು. ಬಡತನದ ಹಿನ್ನೆಲೆಯಿಂದ ಬಂದರೂ ಕಷ್ಟಪಟ್ಟು ಮೇಲೆ ಬಂದ ಪ್ರತಿಭಾವಂತ ಯುವಕನ ಕುಟುಂಬದೊಂದಿಗೆ ಸಮಾಜ ಈಗ ನಿಲ್ಲಬೇಕು” ಎಂದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಸಂತಾಪ ಸೂಚಿಸಿ ಮಾತನಾಡಿ, “ಸಂಘದ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಮತ್ತು ತಂತ್ರಗಾರರಾಗಿದ್ದ ಸಂದೀಪ್ ಅಗಲಿಗೆ ನಮ್ಮ ಸಂಘಕ್ಕೆ ದೊಡ್ಡ ನಷ್ಟ. ಅಪಘಾತದ ನಂತರ 21 ದಿನಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಗ, ಸಂಘದ ಮನವಿಗೆ ಸ್ಪಂದಿಸಿ ಸಂಘದ ಸದಸ್ಯರು ಮತ್ತು ಉದಾರ ದಾನಿಗಳು ಗಣನೀಯ ಆರ್ಥಿಕ ಸಹಾಯ ನೀಡಿದರು. ಸಹಾಯ ಮಾಡಿದ ಎಲ್ಲರಿಗೂ ಸಂಘವು ಸದಾ ಕೃತಜ್ಞವಾಗಿರುತ್ತದೆ” ಎಂದು ತಿಳಿಸಿದರು.

ಜಿಲ್ಲಾ ಮತ್ತು ತಾಲೂಕು ಸಂಘಗಳು ಹಾಗೂ ದಾನಿಗಳಿಂದ ಸಂಗ್ರಹಿಸಲಾದ ಆರ್ಥಿಕ ಸಹಾಯವನ್ನು ಸಂದೀಪ್ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸಂದೀಪ್ ಅವರ ತಾಯಿ ಜಲಜಾ, ತಂದೆ ವಿಠಲ್ ಮತ್ತು ಕುಟುಂಬದ ಇತರ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪತ್ರಕರ್ತ ದೀಪಕ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

ಉಡುಪಿ ತಾಲೂಕು ಭರವಸೆ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೋಳ್ಯ, ಬೆಳ್ಳಿ ಹಬ್ಬ ಸಮಿತಿ ನಿರ್ದೇಶಕ ಮೊಹಮ್ಮದ್ ಶರೀಫ್ ಕಾರ್ಕಳ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಅಚ್ಲಾಡಿ, ಹಿರಿಯ ಪತ್ರಕರ್ತರಾದ ಶಶಿಧರ್ ಮಾಸ್ತಿಬೈಲು, ನಾಗರಾಜ್ ರಾವ್, ಜನಾರ್ದನ್ ಕೊಡವೂರು, ರಹೀಮ್ ಉಜಿರೆ, ಹರೀಶ್ ಪಾಲೇಚಾರ್, ಚೇತನ್ ಮಾಟಪಾಡಿ, ಪರ್ಕ್ಷಿತ್ ಶೇಟ್ ಮತ್ತು ಸಂದೀಪ್ ಪೂಜಾರಿ ಅವರ ಸಹೋದರಿ ಸರಿತಾ ಸೇರಿದಂತೆ ಹಲವರು ಗೌರವ ನಮನ ಸಲ್ಲಿಸಿದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

13 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

13 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

13 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

14 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

15 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

15 hours ago