ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2021-23ನೆ ಸಾಲಿನ ನೂತನ ಅಧ್ಯಕ್ಷರಾಗಿ ನಮ್ಮ ಟಿವಿ ವಾಹಿನಿಯ ರಾಜೇಶ್ ಶೆಟ್ಟಿ ಅಲೆವೂರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ನಝೀರ್ ಪೊಲ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ಅಜ್ಜರಕಾಡಿನ ಐಎಂಎ ಭವನದಲ್ಲಿ ಫೆ.16ರಂದು ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ಪಕ್ರಿಯೆ ನಡೆಸಲಾಯಿತು.
ಉಪಾಧ್ಯಕ್ಷರಾಗಿ ವಿನಯ ಪಾಯಸ್ ಕುಂದಾಪುರ, ಬಾಲಕೃಷ್ಣ ಪೂಜಾರಿ ಕಾಪು, ಆರ್ ಬಿ ಜಗದೀಶ್ ಕಾರ್ಕಳ, ಸಹಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ ಬ್ರಹ್ಮಾವರ, ಕೋಶಾಧಿಕಾರಿಯಾಗಿ ಉಮೇಶ್ ಮಾರ್ಪಳ್ಳಿ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ ಎರ್ಮಾಳ್ ಆಯ್ಕೆಯಾದರು.
ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಯ್ಬರ್ ಕಟ್ಟೆ, ಪ್ರಮೋದ್ ಸುವರ್ಣ, ಸಂತೋಶ್ ನಾಯ್ಕ್, ಉದಯ್ ಕುಮಾರ್ ತಲ್ಲೂರು, ಹರ್ಶಿಣಿ ಬ್ರಹ್ಮಾವರ, ಹರಿಪ್ರಸಾದ್ ನಂದಳಿಕೆ, ಸಂಜೀವ ಆರ್ಡಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯನ್ನು ವಾರ್ತಾಧಿಕಾರಿ ಮಂಜುನಾಥ್ ನಡೆಸಿ ಕೊಟ್ಟರು. ನಿರ್ಗಮನ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮನ ಪ್ರಧಾನ ಕಾರ್ಯದರ್ಶಿ ಸಂತೋಷ್ ನಾಯಕ್ ವರದಿ ವಾಚಿಸಿದರು. ನಿರ್ಗಮನ ಕೋಶಾಧಿಕಾರಿ ದಿವಾಕರ ಭಂಡಾರಿ ಲೆಕ್ಕಪತ್ರ ಮಂಡಿಸಿದರು. ರಾಕೇಶ್ ಕುಂಜೂರು ಕಾರ್ಯ ಕ್ರಮ ನಿರೂಪಿಸಿದರು
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…