ಉಡುಪಿ: ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ಉದ್ಘಾಟನೆ ಕಾರ್ಯಕ್ರಮ ಮಂಗಳ ವಾರಸಂತೆಕಟ್ಟೆ ಲಕ್ಷ್ಮೀನಗರದ ಗ್ರೀನ್ ಎಕರ್ಷ್ನಲ್ಲಿ ಜರಗಿತು.
ಕೇಮಾರು ಸಾಂದೀಪನೀ ಸಾಧನಾ ಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ, ಉಡುಪಿ ಡಯಾಸಿಸ್ನ ವಿಕಾರ್ ಜನರಲ್ ವಂ| ಫರ್ಡಿನಾಂಡ್ ಗೊನ್ಸಾಲ್ವಿಸ್ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದರು.
ಈಶವಿಠಲದಾಸ ಶ್ರೀಗಳು ಮಾತನಾಡಿ, ಸಂಘಟನೆಗಳಿಂದ ಪರಿಹಾರ ಸಾಧ್ಯವಿದೆ. ಕಾರ್ಯ ಕ್ರಮಗಳಲ್ಲಿ ಗುಣಮಟ್ಟದ ಆಹಾರ ಒದಗಿಸುವ ಮೂಲಕ ಎಲ್ಲ ಕ್ಯಾಟರಿಂಗ್ ಸಂಸ್ಥೆಗಳು ಉತ್ತಮ ಹೆಸರುಗಳಿಸಿ ಅಭಿವೃದ್ಧಿ ಹೊಂದ ಬೇಕು ಎಂದರು. ಮಾಲಕರು, ನೌಕರರ ಮಕ್ಕಳು ಶಿಕ್ಷಣ, ಆರೋಗ್ಯದ ಬಗ್ಗೆ ಮುತುವರ್ಜಿ ವಹಿಸುವಂತೆ ಸಲಹೆ ನೀಡಿದರು.
ವಂ| ಫರ್ಡಿನಾಂಡ್ ಗೊನ್ಸಾಲ್ವಿಸ್ ಮಾತನಾಡಿ, ಜನರ ಹಸಿವು ನೀಗಿಸುವ, ಊಟ ಕೊಡುವ ಪುಣ್ಯದ ಕಾರ್ಯವನ್ನು ಕ್ಯಾಟರಿಂಗ್ ಸಂಸ್ಥೆಗಳು ನಿರ್ವಹಿಸುತ್ತಿವೆ. ಎಲ್ಲರೂ ಸಂಘಟಿತರಾಗಿದ್ದರೆ ಸಾಧನೆ ಮಾಡಲು ಸಾಧ್ಯ. ಉತ್ತಮ ಊಟೋಪಚಾರದ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಿ ಎಲ್ಲ ಕ್ಯಾಟರಿಂಗ್ ಸಂಸ್ಥೆಗಳು ಜನರ ಪ್ರೀತಿಗೆ ಪಾತ್ರರಾಗಬೇಕು ಎಂದು ಹಾರೈಸಿದರು.
ಸಂಘದ ಉಪಾಧ್ಯಕ್ಷ ಜೂಲಿ ಯಸ್ ಲಿವೀಸ್ ದಾನಿಗಳ ಪಟ್ಟಿ ವಾಚಿಸಿ ದರು. ಕಾರ್ಯದರ್ಶಿ ಗಣೇಶ್ ಸಾಲ್ಯಾನ್ ವಂದಿಸಿದರು. ಗೌರವ ಸಲಹೆಗಾರ ಡೇನಿಷ್ ರಾಡ್ರಿಗಸ್ ಪ್ರಸ್ತಾವನೆಗೈದು, ಕೋಶಾಧಿಕಾರಿ ದೀಕ್ಷಿತ್ ಶೆಟ್ಟಿ ಸ್ವಾಗತಿಸಿ, ಆಲ್ವಿನ್ ಅಂದ್ರಾದೆ ನಿರೂಪಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…