ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇರುವ ವಿವಿಧ ಕ್ಯಾಟರಿಂಗ್ ಮಾಲಕರು ಒಗ್ಗೂಡಿಸಿ ನೂತನವಾಗಿ ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಷನ್ ಅಸ್ತಿತ್ವಕ್ಕೆ ಬಂದಿದ್ದು ಫೆಬ್ರವರಿ 27 ರಂದು ಮಂಗಳವಾರ ಉಡುಪಿ ಸಂತೆಕಟ್ಟೆಯ ಗ್ರೀನ್ ಎಕ್ರೆಸ್ ಒಪನ್ ಗಾರ್ಡನ್ ನಲ್ಲಿ ಉದ್ಘಾಟನೆಯಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈಗಾಗಲೇ ಜಿಲ್ಲೆಯಾದ್ಯಂತ ಸುಮಾರು ಒಂದು ಸಾವಿರಕ್ಕೂ ಅಧಿಕ ಕೆಟರಿಂಗ್ ಉದ್ಯಮ ನಡೆಸುತ್ತಿರುವ ಮಾಲಕರನ್ನು ಈ ಸಂಸ್ಥೆಯ ಮೂಲಕ ಸಂಘಟಿತಗೊಳಿಸುವ ಉದ್ದೇಶದಿಂದ ಈ ಸಂಸ್ಥೆಯು ಅಸ್ತಿತ್ವಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಉದ್ಯಮವು ಎದುರಿಸಬೇಕಾದ ಸವಾಲುಗಳು ಮತ್ತು ಗ್ರಾಹಕರಿಗೆ ಅತ್ಯುತ್ತಮ ಒದಗಿಸಿ ಕೊಡುವ ಬಗ್ಗೆ ಕಾಲಕಾಲಕ್ಕೆ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ದೃಷ್ಟಿಯಿಂದ ಈ ಸಂಸ್ಥೆಯು ಹಿರಿಯರ ಮಾರ್ಗದರ್ಶನದಂತೆ ಸ್ಥಾಪನೆಗೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಈಶ ವಿಠ್ಠಲ ದಾಸ ಸ್ವಾಮೀಜಿ ಶ್ರೀ ಕ್ಷೇತ್ರಕ್ಕೆ ಮಾಠ, ವಂದನಿಯ ಮಸೋಂಜರ್ ಫರ್ಡಿನಾಂಡ್ ಗೋಂಸ್ವಾಲೀಸ್ ಆಶೀರ್ವಚನ ನೀಡಲಿದ್ದು ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕರ್ನಾಟಕ ರಾಜ್ಯ ಕೆಟರಿಂಗ್ ಫೆಡರೇಶನ್ ಅಧ್ಯಕ್ಷ ಜಿ ಕೆ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕ್ಯಾಟರಿ ಮಾಲಕರ ಅಸೋಸಿಯೇಷನ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಭಾಗವಹಿಸಲಿದ್ದಾರೆ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಸಾಲಿಯನ್ ಕೋಶ ಅಧಿಕಾರಿ ದೀಕ್ಷಿತ್ ಶೆಟ್ಟಿ ಉಪಾಧ್ಯಕ್ಷ ಜೂಲಿಯಸ್ ಲೂಯಿಸ್ ಪ್ರಜ್ವಲ್ ಭಾಸ್ಕರ್ ಶಶಾಂಕ್ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…