Featured

ಉಡುಪಿ : ಜಿಲ್ಲಾ ಗಣರಾಜ್ಯೋತ್ಸವ ಕ್ರಿಕೆಟ್ ಕಪ್ ಗೆದ್ದ ಕರಾವಳಿ ಕಾವಲು ಪೊಲೀಸ್ ತಂಡ -Vishwanews24

ಉಡುಪಿ ಜಿಲ್ಲಾ ಗಣರಾಜ್ಯೋತ್ಸವ ಕ್ರಿಕೆಟ್ ಕಪ್ ಗೆದ್ದ ಕರಾವಳಿ ಕಾವಲು ಪೊಲೀಸ್ ತಂಡ -Vishwanews24

ಉಡುಪಿ: ಕರಾವಳಿ ಕಾವಲು ಪೊಲೀಸ್ ತಂಡ ಈ ಬಾರಿಯ ಉಡುಪಿ ಜಿಲ್ಲಾ ಗಣರಾಜ್ಯೋತ್ಸವ ಕ್ರಿಕೆಟ್ ಕಪ್ ಗೆದ್ದಿದೆ. ಎಸ್‍ಪಿ ನೇತೃತ್ವದ ಜಿಲ್ಲಾ ಪೊಲೀಸ್ ತಂಡ ರನ್ನರ್ ಅಪ್ ಪ್ರಶಸ್ತಿಗೆ ಭಾಜನವಾಗಿದೆ.

72 ನೇ ಗಣರಾಜ್ಯೋತ್ಸವ ಪ್ರಯುಕ್ತ ಉಡುಪಿ ಜಿಲ್ಲಾಡಳಿತ ಮಣಿಪಾಲದ ಎಂಡ್ ಪಾಯಿಂಟ್ ಮೈದಾನದಲ್ಲಿ ಸೀಮಿತ ಓವರ್ ಗಳ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು. ಡಿಸಿ ಇಲೆವೆನ್, ಉಡುಪಿ ಜಿಲ್ಲಾ ಪೊಲೀಸ್, ಕರಾವಳಿ ಕಾವಲು ಪೊಲೀಸ್, ಜಿಲ್ಲಾ ಸರಕಾರಿ ವೈದ್ಯರ ತಂಡ, ಜಿಲ್ಲಾ ಪಂಚಾಯತ್ ಮತ್ತು ಪತ್ರಕರ್ತರ ತಂಡ ಕ್ರಿಕೆಟ್ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು.

ನಿಗದಿತ 10 ಓವರ್ ಗಳ ಮೊದಲ ಪಂದ್ಯದಲ್ಲಿ ಕರಾವಳಿ ಪೊಲೀಸರ ತಂಡ ಜಿಲ್ಲಾ ವೈದ್ಯಾಧಿಕಾರಿಗಳ ತಂಡವನ್ನು ಸೋಲಿಸಿತು. ಡಿಸಿ ಇಲೆವೆನ್ ಮತ್ತು ಜಿಲ್ಲಾ ಪೊಲೀಸ್ ತಂಡಗಳ ನಡುವೆ ನಡೆದ ಜಿದ್ದಾಜಿದ್ದಿನ ಲೀಗ್ ಪಂದ್ಯದಲ್ಲಿ ಎಸ್ ಪಿ. ವಿಷ್ಣುವರ್ಧನ್ ನೇತೃತ್ವದ ತಂಡ ವಿಜಯಿಯಾಯಿತು. ಸೆಮಿ ಫೈನಲ್ ನಲ್ಲಿ ಪತ್ರಕರ್ತರ ತಂಡ ಜಿಲ್ಲಾ ಪೊಲೀಸ್ ತಂಡದ ಎದುರು ಸೋಲನ್ನು ಅನುಭವಿಸಿತು. ಸಿಇಒ ನವೀನ್ ಭಟ್ ನೇತೃತ್ವದ ಜಿಲ್ಲಾ ಪಂಚಾಯತ್ ತಂಡವನ್ನು ಸಿಎಸ್‍ಪಿ ತಂಡ ಮಣಿಸಿ ಫೈನಲ್ ಗೆ ಪ್ರವೇಶಿಸಿತು.

ಇದನ್ನೂ ಓದಿ : ಕೇಂದ್ರದಿಂದ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ 40 ಕೋಟಿ ರೂ. ಬಿಡುಗಡೆ : ಸದಾನಂದ ಗೌಡ -Vishwanews24

ಕರಾವಳಿ ಕಾವಲು ಪೊಲೀಸ್ ತಂಡ ಉಡುಪಿ ಜಿಲ್ಲಾ ಪೊಲೀಸ್ ತಂಡವನ್ನು ಮಣಿಸಿ 2020 ಗಣರಾಜ್ಯೋತ್ಸವ ಕಪ್ ಗೆದ್ದಿದೆ. ಗೆಲ್ಲುವ ಹಾಟ್ ಫೇವರೆಟ್ ತಂಡವೆಂದು ಬಿಂಬಿತವಾಗಿದ್ದ ಜಿಲ್ಲಾ ಪೊಲೀಸ್ ತಂಡ ರೋಚಕ ತಿರುವು ಕಂಡು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಜಿಲ್ಲಾ ಪೊಲೀಸ್ ತಂಡದಲ್ಲಿ ಆಡಿದ ಪ್ರಶಾಂತ್ ಪಡುಕೆರೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಎಸ್ಪಿ ಚೇತನ್ ಕುಮಾರ್, ಜಿಲ್ಲಾ ಪಂಚಾಯತಿ ಸಿಇಓ ನವೀನ್ ಭಟ್, ಜಿಲ್ಲಾ ವೈದ್ಯಾಧಿಕಾರಿ ಡಾ. ಸುಧೀರ್ ಚಂದ್ರ ಚೂಡ ಕೊರೋನಾ ನೋಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲೆಯ ಠಾಣೆಗಳ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಕ್ರಿಕೆಟ್ ಪಂದ್ಯಾಟದಲ್ಲಿ ಪಾಲ್ಗೊಂಡರು

Vishwa News 24

Recent Posts

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

25 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

29 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

35 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

47 minutes ago

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

17 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

21 hours ago