Featured

ಉಡುಪಿ ಜಿಲ್ಲಾ ಟೈಲರ್ಸ್ ಅಸೋಸಿಯೇಷನ್ ನ “ರಜತ ಸಂಭ್ರಮ” ; ಆ.10 ರಂದು ಬೃಹತ್ ಸಮಾವೇಶ – vishwanews24

ಉಡುಪಿ ಜಿಲ್ಲಾ ಟೈಲರ್ಸ್ ಅಸೋಸಿಯೇಷನ್ ನ “ರಜತ ಸಂಭ್ರಮ” ; ಆ.10 ರಂದು ಬೃಹತ್ ಸಮಾವೇಶ

ಉಡುಪಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಉಡುಪಿ ಜಿಲ್ಲಾ ಸಮಿತಿಯ “ರಜತ ಸಂಭ್ರಮ”-25, ಟೈಲರ್ಸ್ ವೃತ್ತಿ‌ ಬಾಂಧವರ ಬೃಹತ್ ಸಮಾವೇಶ ಹಾಗೂ ಮಹಾಸಭೆ ಇದೇ ಆ.10 ರಂದು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಸ್ಟೇಟ್ ಟೈಲರ‌್ಸ್ ಅಸೋಸಿಯೇಷನ್ ರಾಜ್ಯ ಕೋಶಾಧಿಕಾರಿ ಕೆ. ರಾಮಚಂದ್ರ ಮತ್ತು ಉಡುಪಿ ಜಿಲ್ಲಾಧ್ಯಕ್ಷ ಗುರುರಾಜ ಎಂ. ಶೆಟ್ಟಿ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಸಮಾವೇಶವನ್ನು ಉದ್ಘಾಟಿಸುವರು. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು. ರಾಜ್ಯಾದ್ಯಂತ ಸುಮಾರು 10ಲಕ್ಷಕ್ಕೂ ಅಧಿಕ ಸ್ತ್ರೀ-ಪುರುಷರು ಟೈಲರ್ ವೃತ್ತಿಯನ್ನು ಅವಲಂಬಿಸಿ ಕೊಂಡಿದ್ದು, ನಮ್ಮ ಬೇಡಿಕೆ ಈಡೇರಿಸುವಂತೆ ನಿರಂತರ 25 ವರ್ಷಗಳಿಂದ ರಾಜ್ಯ ಸರ್ಕಾರವನ್ನು ವಿವಿಧ ರೀತಿಯಲ್ಲಿ ಬಂದಿದ್ದೇವೆ. ಆದರೆ ಈವರೆಗೂ‌ ನಮ್ಮ ನ್ಯಾಯಯುತ ಬೇಡಿಕೆಗಳು ಈಡೇರಿಲ್ಲ. ಆದ್ದರಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಟೈಲರ್ ವೃತ್ತಿ ಬಾಂಧವರಿಗೆ ‘ಭವಿಷ್ಯ ನಿಧಿ’ ಜಾರಿಗೊಳಿಸಬೇಕು. ಸರ್ಕಾರ ಜವಳಿ ಉತ್ಪನ್ನಗಳಾದ ಬಟ್ಟೆಗಳು, ಸಿದ್ಧ ಉಡುಪುಗಳು ಹಾಗೂ ಹೊಲಿಗೆ ಯಂತ್ರ, ದಾರ ಇನ್ನಿತರ ಟೈಲರ್ ಬಳಸುವ ಎಲ್ಲಾ ಕಚ್ಚಾ ವಸ್ತುಗಳ ಮೇಲೆ ಸೆಸ್ ವಿಧಿಸಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ರೀತಿಯಲ್ಲಿ ನಮ್ಮ ಸಂಘಟಣೆಗೂ ಸವಲತ್ತುಗಳನ್ನು ನೀಡಬೇಕು. ಟೈಲರ್ಸ್ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರೆಂದು‌ ಪರಿಗಣಿಸಿ ಮಾಸಾಶನ, ವೃದ್ಧಾಪ್ಯ ವೇತನ, ವಿಧವಾ ವೇತನ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಿಷ್ಯವೇತನ, ಉಚಿತ ಆರೋಗ್ಯ ಸೇವೆ, ಜೀವ ವಿಮೆ, ಆರೋಗ್ಯ ವಿಮೆ ನೀಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಟೈಲರ್ಸ್ ‘ಕ್ಷೇಮ ನಿಧಿ ಮಂಡಳಿ’ಯನ್ನು ರಚಿಸಬೇಕು ಅಥವಾ ಟೈಲರ್ಸ್ ವೃತ್ತಿ ಬಾಂಧವರನ್ನು ‘ಜವಳಿ ನಿಗಮ’ಕ್ಕೆ ಸೇರ್ಪಡೆಗೊಳಿಸಿ ಅದರ ಮೂಲಕ ನಮ್ಮ ಬೇಡಿಕೆಯನ್ನು ಈಡೇರಿಸಬೇಕು‌ ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ದಯಾನಂದ ಕೋಟ್ಯಾನ್ ಕೊರಂಗ್ರಪಾಡಿ, ಜೊತೆ ಕಾರ್ಯದರ್ಶಿ ಸೌಮ್ಯ ಭಟ್ ಇದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago