ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು.
ಬೆದರಿಕೆ ಸಂದೇಶದ ಮಾಹಿತಿ ದೊರಕುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯ ಸಂಕೀರ್ಣಕ್ಕೆ ಆಗಮಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಬೆದರಿಕೆ ಸಂದೇಶದ ಮೂಲ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…