ಉಡುಪಿ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಟೋಲ್ ಗದ್ದಲ,ಆಡಳಿತ ಪಕ್ಷದ ಸದಸ್ಯರಿಂದ ಸಭತ್ಯಾಗ.
ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ನ 14 ನೇ ಸಾಮಾನ್ಯ ಸಭೆಯು ಟೋಲ್ ಹಾಗೂ ಮರುಳುಸಮಸ್ಯೆಗೆ ಬಲಿಯಾಯಿತು.
ಕೋರಂ ಇಲ್ಲದೆ ಅರ್ಧಗಂಟೆ ತಡವಾಗಿ ಆರಂಭವಾದ ಸಭೆಯು ಪ್ರಶ್ನಾವಳಿಯ ಸಮಯದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರು ಸಾಸ್ತಾನ ಮತ್ತು ಹೆಜಮಾಡಿಯ ಟೋಲ್ ಗೇಟ್ಗಳಲ್ಲಿ ಸ್ಥಳಿಯ ವಾಹನಗಳಿಗೆ ಟೋಲ್ ಸಂಗ್ರಹಿಸುವ ವಿರುದ್ಧ ಮಾತನಾಡಿದರು.ಅದಕ್ಕೆ ಧ್ವನಿಗೂಡಿಸಿದ ಗೀತಾಂಜಲಿ ಎಂ ಸುವರ್ಣ ಹೆಜಮಾಡಿ ಟೋಲ್ನಲ್ಲಿ ಪೋಲಿಸರನ್ನ ಹಾಕಿ ಸ್ಥಳಿಯ ವಾಹನಗಳಿಗೆ ಟೋಲ್ ಸಂಗ್ರಹಿಸುತ್ತಾರೆ ಪ್ರತಿಭಟನೆ ಮಾಡಿದವರರನ್ನ ಬಂಧನ ಮಾಡುತ್ತಾರೆ ಇದು ಎಷ್ಟು ಸರಿ ಈ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೂಡ ಕೈಗೊಂಡಿಲ್ಲ ಎಂದರು.
ಈ ವಿಚಾರವಾಗಿ ರೇಶ್ಮಾ ಉದಯ ಶೆಟ್ಟಿ ಹಾಗೂ ಪ್ರತಾಪ್ ಶೆಟ್ಟಿ ಮಾರಾಡಿ ಧ್ವನಿಗೂಡಿಸಿ ಸರಿಯಾದ ಸರ್ವೀಸ್ ರಸ್ತೆ ನಿರ್ಮಾಣ ಮಾಡಿಲ್ಲ, ಪೂರ್ತಿ ಹೆದ್ದಾರಿ ಕಾಮಗಾರಿ ಮುಗಿಯದೇ ಸ್ಥಳಿಯ ವಾಹನಗಳಿಗೆ ಟೋಲ್ ಸಂಗ್ರಹಿಸುತ್ತಿರುವುದು ಹಗಲು ದರೋಡೆ ಎಂದು ಬೇಸರ ವ್ಯಕ್ತ ಪಡಿಸಿದರು.
ಒಟ್ಟಾರೆಯಾಗಿ ಇಂದಿನ ಜಿಲ್ಲಾ ಪಂಚಾಯತ್ನ ಸಾಮಾನ್ಯ ಸಭೆಯು ಟೋಲ್ ಗಲಾಟೆಯೊಂದಿಗೆ ಅರ್ಧಕ್ಕೆ ಮೊಟಕುಗೊಂಡಿತು.
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…