ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ್ ಅವರು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತ ಕರಪತ್ರ ವಿತರಿಸಿ, ಚಹಾ ಹಾಗೂ ಸಿಹಿತಿಂಡಿ ನೀಡಿ ಜಾಗೃತಿ ಮೂಡಿಸಿದರು. ಈ ರೀತಿ ಜ.17ರವರೆಗೆ ಪೊಲೀಸರು ವಾಹನ ಚಾಲಕರಿಗೆ ಚಹಾ ಸಿಹಿತಿಂಡಿಗಳನ್ನು ನೀಡಿ ಅರಿವು ಮೂಡಿಸಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ.ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ಲೂಯಿಸ್ ಲೋಬೋ, ರೋಟರಿ ಕ್ಲಬ್ ನ ಜೈವಿಠಲ್ ಉಪಸ್ಥಿತರಿದ್ದರು.
ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಸ್ವಾಗತಿಸಿದರು. ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ವಂದಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…