Featured

ಉಡುಪಿ : ಜಿಲ್ಲಾ ಬಿಜೆಪಿ ಅಧ್ಯಕ್ಷರ ತಾರತಮ್ಯ ನೀತಿ :- ಕಂಗೆಟ್ಟ ಕಾರ್ಯಕರ್ತರಿಂದ ಪ್ರತಿಭಟನೆ ತಯಾರಿ – vishwanews24

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ತಾರತಮ್ಯ ನೀತಿ – ಕಂಗೆಟ್ಟ ಕಾರ್ಯಕರ್ತರಿಂದ ಪ್ರತಿಭಟನೆ ತಯಾರಿ

ಉಡುಪಿ: ಸದ್ಯ ಉಡುಪಿ ಜಿಲ್ಲಾ ಬಿಜೆಪಿ ಪಕ್ಷ ಸಂಘಟನೆ ಹೊರತು ಪಡಿಸಿ ಪ್ರತಿದಿನ ಹೊಸ ರೂಪಾಂತರ ಸುದ್ದಿಗಳಿಗೆ ಕಾರಣವಾಗುತ್ತಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರ ವಿರುದ್ಧ ಅಸಮಾಧಾನ ಸ್ಪೋಟಗೊಂಡ ಬೆನ್ನಲ್ಲೇ ಎಂ.ಎಲ್.ಸಿ ಚುನಾವಣೆಯಲ್ಲಿ ಕೂಡ ದೊಡ್ಡ ಮಟ್ಟದಲ್ಲಿ ಇವರಿಗೆ ವಿರೋಧ ವ್ಯಕ್ತವಾಗಿತ್ತು.

ಅದು‌ ಮುಗಿದ ಕೆಲವೇ ದಿನದಲ್ಲಿ ಕಾರ್ಯಕರ್ತರು ಹಾಗೂ ಜಿಲ್ಲಾಧ್ಯಕ್ಷರ ನಡುವಿನ ಭಿನ್ನಮತ ಸೋಮವಾರದ ದಿನದಂದು ಕೈ ಕೈ ಮಿಲಾಯಿಸುವ ಮಟ್ಟಿಗೆ ಬೆಳೆದುಹೋಗಿದೆ.

ಸೋಮವಾರದಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆಂದು ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರನ್ನು ಪಾರ್ಟಿ ಕಚೇರಿಯಿಂದ ಹೊರ ನಡೆಯಿರಿ ಎಂದು ತಾಕಿತ್ತು ಮಾಡಿದ್ದಾರೆ ಎನ್ನಲಾಗಿದೆ.

ಇದರಿಂದ ಬೇಸತ್ತ ಕಾರ್ಯಕರ್ತರು ಪ್ರತಿಭಟನೆ ಮುಗಿದ ನಂತರ ಜಿಲ್ಲಾಧ್ಯಕ್ಷರ ನಡೆಯ ಬಗ್ಗೆ ಪ್ರಶ್ನಿಸಿದ ಸಮಯದಲ್ಲಿ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಹಾಲಿ ನಗರಸಭ ಸದಸ್ಯರೊಬ್ಬರು ಪಾರ್ಟಿ ಕಚೇರಿ ಟೇಬಲನ್ನು ಬಡಿದು ಬಡಿದು ನೀವು ಬಿಜೆಪಿ ಪಾರ್ಟಿ ಕಚೇರಿಗೆ ಬರಲು ಯಾವ ಹಂತದ ಪದಾಧಿಕಾರಿಗಳು ಎಂಬ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.

ಇದರಿಂದ ಬೇಸತ್ತ ಕಾರ್ಯಕರ್ತರು ಪಾರ್ಟಿ ಕಚೇರಿಯಿಂದ ಹೊರನಡೆದು ಅಸಮಾಧಾನ ಹೊರಹಾಕಿದ್ದು , ಸೂಕ್ತ ನ್ಯಾಯ ಸಿಗದೆ ಇದ್ದಲ್ಲಿ ಪಾರ್ಟಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ಹೊರಬಿದ್ದಿದೆ.

ಈ ನಡುವೆ ಇತ್ತೀಚಿನ ಎರಡೂ ಚುನಾವಣೆಯಲ್ಲಿ ಪಕ್ಷದ ವಿರುದ್ದ ಕೆಲಸ ಮಾಡಿದ ಪದಾಧಿಕಾರಿಗಳ ಪಟ್ಟಿಯು ಪಕ್ಷದ ಹಿರಿಯರ ಕೈ ತಲುಪಿದ್ದು ಯಾವುದೇ ಸಂಧರ್ಭದಲ್ಲಿ ಉಡುಪಿ ಜಿಲ್ಲೆಯ ತಂಡದ ಬದಲಾವಣೆಯ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಬ್ಯುರೋ ರಿಪೋರ್ಟ್
ವಿಶ್ವನ್ಯೂಸ್24

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

19 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

20 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

20 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

20 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago