ಉಡುಪಿ ಜಿಲ್ಲಾ ಬಿಜೆಪಿ ಎಡವಟ್ಟು-ಮಾಜಿ ಜಿಲ್ಲಾಧ್ಯಕ್ಷನ ಲೆಟರ್ ಹೆಡ್ ನಲ್ಲಿ ಕಾರ್ಯಕರ್ತನಿಗೆ ಉಚ್ಛಾಟನ ಪತ್ರ:vishwanews24.
ಉಡುಪಿ: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯನಿಂದಾದ ಅಶಿಸ್ತು ಮತ್ತು ಪಕ್ಷಕ್ಕೆ ಅಶಿಸ್ತು ತೋರಿರುವ ಕಾರಣಕ್ಕಾಗಿ ಕಾರ್ಯಕರ್ತನಿಗೆ ನೀಡಿದ ಉಚ್ಛಾಟನ ಪತ್ರದಿಂದಾಗಿ ಜಿಲ್ಲಾ ಬಿಜೆಪಿ ಎಡವಟ್ಟು ಮಾಡಿಕೊಂಡಿದೆ.
ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಹರೀಶ್ ಸಾಲಿಯಾನ್ ಎಂಬವರಿಂದ ಹಿರಿಯಡಕ ಸೊಸೈಟಿ ಪೂರ್ವ ತಯಾರಿ ಸಭೆಯಲ್ಲಿ ಅಶಿಸ್ತು ತೋರಿದ ಎಂಬ ಕಾರಣಕ್ಕಾಗಿ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯ ಲೆಟರ್ ಹೆಡ್ ನಲ್ಲಿ ನೋಟಿಸ್ ನೀಡುವ ಮುಖೇನ ಹಾಲಿ ಉಡುಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಪಹಾಸ್ಯಕ್ಕಿಡಾಗಿದ್ದಾರೆ.
ಪ್ರಸ್ತುತ ಉಡುಪಿ ಬಿಜೆಪಿಗೆ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾಧ್ಯಕ್ಷರಾಗಿದ್ದು ಉಚ್ಛಾಟನ ಪತ್ರಕ್ಕೆ ಮಾತ್ರ ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆಯ ಲೆಟರ್ ಹೆಡ್ ಬಳಸಿಕೊಂಡಿರುವುದು “ಕೋಪದಲ್ಲಿಕೊಯ್ದ ಮೂಗು ಮತ್ತೆ ಬಂದಿತೇ” ಎಂಬ ಗಾದೆಮಾತೆಯಂತಾಗಿದೆ ಎಂದು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಮಾಡುತ್ತಿದ್ದಾರೆ.
ಸದ್ಯ ಈ ಲೆಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕಾರ್ಯಕರ್ತ ಮತ್ತು ನಾಯಕರ ನಡುವೆ ಭಿನ್ನಮತ ಸೃಷ್ಟಿಸಲು ಈ ರೀತಿಯ ಚಟುವಟಿಕೆ ನಡೆಯುತ್ತಿದೆಂಬ ಮಾತು ಕೂಡ ಕೇಳಿ ಬರುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…