ಕಾಪು : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾಪು ತಾಲೂಕಿನ 2023-2024ನೇ ಅವಧಿಯ ನೂತನ ಅಧ್ಯಕ್ಷರಾಗಿ ನಸೀರ್ ಅಹಮದ್ ಆಯ್ಕೆಯಾಗಿದ್ದಾರೆ.
ಕಾಪುವಿನಲ್ಲಿ ನಡೆದ ತಾಲೂಕು ಸಮಿತಿಯ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಈ ವೇಳೆ ಉಪಾಧ್ಯಕ್ಷರಾಗಿ ಮುಸ್ತಾಕ್ ಇಬ್ರಾಹಿಂ ಬೆಳಪು, ಕಾರ್ಯದರ್ಶಿಯಾಗಿ ರಿಯಾಜ್ ಅಹಮದ್ ನಜೀರ್ ಮುದರ0ಗಡಿ, ಜೊತೆ ಕಾರ್ಯದರ್ಶಿಯಾಗಿ ವೈ. ಎಮ್ ಇಲಿಯಾಸ್ ಕಟಪಾಡಿ, ಕೋಶಾಧಿಕಾರಿಯಾಗಿ ಮೊಹಮ್ಮದ್ ಆಝಮ್ ಶೇಕ್ ಉಚ್ಚಿಲ ಹಾಗೂ ತಾಲೂಕು ಸಮಿತಿಯ ಸದಸ್ಯರಾಗಿ ಬಿ.ಎಮ್ ಮೊಯಿದಿನ್ ಕಟಪಾಡಿ, ಅಬ್ದುಲ್ ರಜಾಕ್ ಕಟಪಾಡಿ, ಅಮೀರ್ ಹಂಝ ಕಾಪು , ರಮೀಜ್ ಹುಸೈನ್ ಪಡುಬಿದ್ರಿ, ಅಬ್ದುಲ್ ಹಮೀದ್ ಪಡುಬಿದ್ರಿ, ಮುಹಮ್ಮದ್ ಇಕ್ಬಾಲ್ ಸಾಹೇಬ್ ಮಜೂರ್, ಮುಹಮ್ಮದ್ ಸಾದಿಕ್ ದಿನಾರ್, ಮುಹಮ್ಮದ್ ಸುಲೇಮಾನ್ ಮಲ್ಲಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ವೇಳೆ ಅಬ್ದುರಹಮಾನ್ ಚಂದ್ರ ನಗರ, ಮೊಹಮ್ಮದ್ ಅಷ್ಪಾಕ್ ಮೊಹಸಿನ್ ಮಲ್ಲಾರ್, ಎಮ್. ಎಸ್. ಅಬ್ಬಾಸ್ ಹಾಜಿ ಕನ್ನಂಗಾರ್, ಅಬೂಬಕರ್ ಪಾದೂರ್ ಮತ್ತು ಸಿರಾಜ್ ಉಚ್ಚಿಲ ಅವರನ್ನು ತಾಲೂಕು ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಯಿತು. ಜಿಲ್ಲಾ ಸಮಿತಿಗೆ ಎಮ್. ಪಿ. ಮೊಯಿದಿನಬ್ಬ, ಅಬ್ದುರಹಮಾನ್ ಕನ್ನಂಗಾರ್ ರವರು ಜಿಲ್ಲಾ ವತಿಯಿಂದ ನೇಮಿಸಲ್ಪಟ್ಟರು.
ಜಿಲ್ಲಾ ಉಪಾಧ್ಯಕ್ಷರಾದ ಸಲಾಹುದ್ದಿನ್ ಹೂಡೆ ಚುನಾವಣಾ ಪ್ರಕ್ರಿಯೆ ನಡೆಸಿ ಕೊಟ್ಟರು. ಹಾಲಿ ಅಧ್ಯಕ್ಷರಾದ ಶಭಿ ಅಹ್ಮದ್ ಖಾಝಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇದ್ರಿಸ್, ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಸಂಘಟನಾ ಕಾರ್ಯದರ್ಶಿ ಎಸ್. ಕೆ. ಇಕ್ಬಾಲ್ , ಅನ್ವರ್ ಅಲಿ, ಜನಾಬ್ ಶಬೀಹ್ ಅಹಮದ್ ಕಾಝಿ ಅವರು ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…