ಕಾಪು : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾಪು ತಾಲೂಕಿನ 2023-2024ನೇ ಅವಧಿಯ ನೂತನ ಅಧ್ಯಕ್ಷರಾಗಿ ನಸೀರ್ ಅಹಮದ್ ಆಯ್ಕೆಯಾಗಿದ್ದಾರೆ.
ಕಾಪುವಿನಲ್ಲಿ ನಡೆದ ತಾಲೂಕು ಸಮಿತಿಯ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಈ ವೇಳೆ ಉಪಾಧ್ಯಕ್ಷರಾಗಿ ಮುಸ್ತಾಕ್ ಇಬ್ರಾಹಿಂ ಬೆಳಪು, ಕಾರ್ಯದರ್ಶಿಯಾಗಿ ರಿಯಾಜ್ ಅಹಮದ್ ನಜೀರ್ ಮುದರ0ಗಡಿ, ಜೊತೆ ಕಾರ್ಯದರ್ಶಿಯಾಗಿ ವೈ. ಎಮ್ ಇಲಿಯಾಸ್ ಕಟಪಾಡಿ, ಕೋಶಾಧಿಕಾರಿಯಾಗಿ ಮೊಹಮ್ಮದ್ ಆಝಮ್ ಶೇಕ್ ಉಚ್ಚಿಲ ಹಾಗೂ ತಾಲೂಕು ಸಮಿತಿಯ ಸದಸ್ಯರಾಗಿ ಬಿ.ಎಮ್ ಮೊಯಿದಿನ್ ಕಟಪಾಡಿ, ಅಬ್ದುಲ್ ರಜಾಕ್ ಕಟಪಾಡಿ, ಅಮೀರ್ ಹಂಝ ಕಾಪು , ರಮೀಜ್ ಹುಸೈನ್ ಪಡುಬಿದ್ರಿ, ಅಬ್ದುಲ್ ಹಮೀದ್ ಪಡುಬಿದ್ರಿ, ಮುಹಮ್ಮದ್ ಇಕ್ಬಾಲ್ ಸಾಹೇಬ್ ಮಜೂರ್, ಮುಹಮ್ಮದ್ ಸಾದಿಕ್ ದಿನಾರ್, ಮುಹಮ್ಮದ್ ಸುಲೇಮಾನ್ ಮಲ್ಲಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ವೇಳೆ ಅಬ್ದುರಹಮಾನ್ ಚಂದ್ರ ನಗರ, ಮೊಹಮ್ಮದ್ ಅಷ್ಪಾಕ್ ಮೊಹಸಿನ್ ಮಲ್ಲಾರ್, ಎಮ್. ಎಸ್. ಅಬ್ಬಾಸ್ ಹಾಜಿ ಕನ್ನಂಗಾರ್, ಅಬೂಬಕರ್ ಪಾದೂರ್ ಮತ್ತು ಸಿರಾಜ್ ಉಚ್ಚಿಲ ಅವರನ್ನು ತಾಲೂಕು ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಯಿತು. ಜಿಲ್ಲಾ ಸಮಿತಿಗೆ ಎಮ್. ಪಿ. ಮೊಯಿದಿನಬ್ಬ, ಅಬ್ದುರಹಮಾನ್ ಕನ್ನಂಗಾರ್ ರವರು ಜಿಲ್ಲಾ ವತಿಯಿಂದ ನೇಮಿಸಲ್ಪಟ್ಟರು.
ಜಿಲ್ಲಾ ಉಪಾಧ್ಯಕ್ಷರಾದ ಸಲಾಹುದ್ದಿನ್ ಹೂಡೆ ಚುನಾವಣಾ ಪ್ರಕ್ರಿಯೆ ನಡೆಸಿ ಕೊಟ್ಟರು. ಹಾಲಿ ಅಧ್ಯಕ್ಷರಾದ ಶಭಿ ಅಹ್ಮದ್ ಖಾಝಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇದ್ರಿಸ್, ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಸಂಘಟನಾ ಕಾರ್ಯದರ್ಶಿ ಎಸ್. ಕೆ. ಇಕ್ಬಾಲ್ , ಅನ್ವರ್ ಅಲಿ, ಜನಾಬ್ ಶಬೀಹ್ ಅಹಮದ್ ಕಾಝಿ ಅವರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…